ರಾಜ್ಯ

ಬೂಕರ್‌ ವಿಜೇತೆ ಬಾನು ಮುಷ್ತಕ್‌ರಿಂದ ಈ ಬಾರಿ ದಸರಾ ಉದ್ಘಾಟನೆ : ಸಿಎಂ ಅಧಿಕೃತ ಘೋಷಣೆ

ಬೆಂಗಳೂರು : ನಾಡಹಬ್ಬ ಮೈಸೂರು ದಸರಾ ಆರಂಭಕ್ಕೆ ದಿನಗಣನೆಗಳು ಶುರುವಾಗಿವೆ. 2025ರ ದಸರಾ ಚಟುವಟಿಗಳ ಸಿದ್ದತೆ ಈಗಾಗಲೇ ಆರಂಭಗೊಂಡಿದ್ದು, ದಸರಾಗೆ ಸೆಪ್ಟೆಂಬರ್ 22ರಂದು ಚಾಲನೆ ಸಿಗಲಿದೆ. ಇನ್ನು ಈ ಬಾರಿ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದಸರಾ ಮಹೋತ್ಸವನ್ನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಅವರ ಹೃದಯ ದೀಪ ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು, ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು ಬಹಳ ಸಂತೋಷ ಆಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್, ರೈತ ಮತ್ತು ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿದ್ದಾರೆ. ಹೀಗಾಗಿ ಮಹಿಳೆಯನ್ನ ದಸರಾ ಮಹೋತ್ಸವ ಉದ್ಘಾಟನೆಗೆ ಆಹ್ವಾನ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಈ ಬಾರಿ ಮೈಸೂರು ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿದ್ದು, ಉದ್ಘಾಟನೆಗೆ ಮೈಸೂರು ಜಿಲ್ಲಾಡಳಿತವು, ಲೇಖಕಿ ಬಾನು ಮುಷ್ತಾಕ್ ಅವರಿಗೆ ಗೌರವದಿಂದ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡಕ್ಕೆ ಬೂಕರ್‌ ತಂದುಕೊಟ್ಟ ಮೊದಲ ಸಾಹಿತಿ ಬಾನು
ಕನ್ನಡದ ಹೆಸರಾಂತ ಸಾಹಿತಿ ಬಾನು ಮುಷ್ತಾಕ್ ಅವರು ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದು ಸಿರಿಗನ್ನಡದ ಸಾಹಿತ್ಯಕ್ಕೆ ದೊರೆತ ಮೊದಲ ಪ್ರಶಸ್ತಿ ಇದಾಗಿದೆ. ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಸಾಹಿತ್ಯಕ್ಕೆ ಮನ್ನಣೆ ಸಿಕ್ಕಂತಾಗಿದೆ.

ಇನ್ನು ಕನ್ನಡ ಸಾಹಿತ್ಯಕ್ಕೆ ಅವರು ನೀಡಿದ ಕೊಡುಗೆ ಅಪಾರ. ಹೀಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಮತ್ತು ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ದಕ್ಕಿವೆ. ಕುಬ, ಬಡವರ ಮಗಳು ಹೆಣ್ಣಲ್ಲ ಕಾದಂಬರಿ, ಹೆಜ್ಜೆ ಮೂಡಿದ ಹಾದಿ, ಬೆಂಕಿಮಳೆ, ಎದೆಯ ಹಣತೆ ಅವರು ಬರೆದ ಕಥಾಸಂಕಲನವಾಗಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago