ರಾಜ್ಯ

ಡೆಂಗ್ಯೂಗೆ ಹಾವೇರಿಯಲ್ಲಿ ೧೩ ವರ್ಷದ ಬಾಲಕ ಸಾವು

ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಅಟ್ಟಹಾಸ ಹೆಚ್ಚಾಗಿ ಹೋಗುತ್ತಿದೆ. ಪ್ರತಿದಿನ ಒಂದಲ್ಲ ಒಂದು ಸಾವಿನ ಪ್ರಕರಣಗಳು ವರದಿಯಾಗುತ್ತಿವೆ. ಜೊತೆಗೆ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುತ್ತಿದೆ.  ಹಾವೇರಿಯಲ್ಲಿಯೂ ಕೂಡ ಡೆಂಗ್ಯೂಗೆ ೧೩ ವರ್ಷದ ಬಾಲಕ ಬಲಿಯಾಗಿದ್ದಾನೆ.

ಹಾವೇರಿ ಜಿಲ್ಲೆ ರಾಣೆ ಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ೧೩ ವರ್ಷದ ಪ್ರೇಮ್‌ ಕುಮಾರ್‌ ಎಂಬ ಬಾಲಕ ಸಾವನ್ನಪ್ಪಿದ್ದು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಕಳೆದ ಒಂದು ವಾರದಿಂದ ಪ್ರೇಮ್‌ ಕುಮಾರ್‌ ಜ್ವರದಿಂದ ಬಳಲುತ್ತಿದ್ದ. ಆಸ್ಪತ್ರೆಯಲ್ಲಿ ಆತನಿಗೆ ಚಿಕಿತ್ಸೆ ಸಹ ನೀಡಲಾಗಿತ್ತು. ಆದರೆ ಇಂದು ಪ್ರೇಮ್‌ ಕುಮಾರ್‌ ಕೊನೆಯುಸಿರೆಳೆದಿದ್ದಾನೆ. ಇನ್ನು ಸ್ಥಳಕ್ಕೆ ರಾಣೆಬೆನ್ನೂರು ಟಿಹೆಚ್‌ ಒ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

2 hours ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

2 hours ago

ಓದುಗರ ಪತ್ರ: ದಂಡ ವಸೂಲಿಯೇ ಪೊಲೀಸರ ಆದ್ಯತೆ ಆಗಬಾರದು

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…

2 hours ago

ವ್ಯವಸ್ಥೆಯನ್ನು ಪ್ರಶ್ನಿಸುವವರು ದಿಮಾಗಿ ನಕ್ಸಲರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…

2 hours ago

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

2 hours ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

2 hours ago