ರಾಜ್ಯ

ತಾಳಿ ಕಟ್ಟುವ ವೇಳೆಯೇ ವರ ಎಸ್ಕೇಪ್‌: ಕಾರಣ ಇಷ್ಟೇ

ಬೆಂಗಳೂರು/ಮೈಸೂರು: ಮದುವೆ ದಿನವೇ ವರ ಹಾಗೂ ಆತನ ಕುಟುಂಬಸ್ಥರು ಮಂಟಪದಿಂದ ಪರಾರಿಯಾಗಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಮೈಸೂರಿನ ಪ್ರೇಮ್‌ಚಂದ್‌ ಎಂಬಾತನೇ ಪರಾರಿಯಾಗಿರುವ ವರನಾಗಿದ್ದು, ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮೈಸೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಯುವಕ ಹಾಗೂ ಸಂತ್ರಸ್ತೆ ಇಬ್ಬರು ಒಳ್ಳೆಯ ಸ್ನೇಹಿತರಾಗಿದ್ದರು. ಇಬ್ಬರ ನಡುವೆಯೂ ಸ್ನೇಹವಾಗಿತ್ತು. ಸಂತ್ರಸ್ತೆ ಬಿಇ ಬಳಿಕ ಎಂಎಸ್‌ ಮುಗಿಸಿ ಫ್ರಾನ್ಸ್‌ನಲ್ಲಿ ಕೆಲಸಕ್ಕೆ ಸೇರಿದ್ದಳು. ಆರೋಪಿ ಪ್ರೇಮ್‌ ಕೂಡ ಪ್ಯಾರೀಸ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಈ ವೇಳೆ ಇಬ್ಬರ ನಡುವೆ ಪ್ರೀತಿಯಾಗಿ ಪ್ಯಾರೀಸ್‌ನಲ್ಲಿ ಸುತ್ತಾಡಿಕೊಂಡಿದ್ದರು.

ಇಬ್ಬರು ಮನೆಯವರು ಒಪ್ಪಿಸಿ ಕಳೆದ ಜುಲೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಕುಟುಂಬಸ್ಥರೆಲ್ಲಾ ಸೇರಿ ಮಾರ್ಚ್.‌3ರಂದು ಪ್ರೇಮ್‌ ಹಾಗೂ ಸಂತ್ರಸ್ತೆಯ ಮದುವೆ ದಿನಾಂಕ ನಿಶ್ಚಯ ಮಾಡಿದ್ದರು.

ಮಾರ್ಚ್.‌1ರಂದು ಮೆಹೆಂದಿ ಹಾಗೂ ಹಳದಿ ಶಾಸ್ತ್ರ ನಡೆದಿತ್ತು. ಈ ವೇಳೆ ಪ್ರೇಮ್‌ಚಂದ್‌ ಮನೆಯವರು ಸಂತ್ರಸ್ತೆ ತಂದೆಯ ಬಳಿಯ 50 ಲಕ್ಷ ನಗದು, ಅರ್ಧ ಕೆಜಿ ಚಿನ್ನ ಹಾಗೂ ಬೆಂಜ್‌ ಕಾರು ನೀಡುವಂತೆ ಬೇಡಿಕೆಯಿಟ್ಟಿದ್ದರು.

ಈ ವೇಳೆ ಸಂತ್ರಸ್ತೆಯ ತಂದೆ ಇದನ್ನು ಕೊಡಲು ಆಗಲ್ಲ. ಮದುವೆಗೆಂದೇ 25 ಲಕ್ಷ ರೂ ಖರ್ಚಾಗಿದೆ ಎಂದು ಹೇಳಿದ್ದರು.

ಈ ವಿಚಾರ ತಿಳಿಯುತ್ತಿದ್ದಂತೆ ಪ್ರೇಮ್‌ ಹಾಗೂ ಆತನ ಕುಟುಂಬಸ್ಥರು ಮದುವೆ ಮಂಟಪದಿಂದ ಪರಾರಿಯಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸಂತ್ರಸ್ತೆ ತಂದೆ ಉಪ್ಪಾರಪೇಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಸಂತ್ರಸ್ತೆಯನ್ನು ಮದುವೆಗೂ ಮುನ್ನ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆಂದು ಉಲ್ಲೇಖಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

3 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

3 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

3 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

3 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

4 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago