ಬೆಂಗಳೂರು/ಮೈಸೂರು: ಮದುವೆ ದಿನವೇ ವರ ಹಾಗೂ ಆತನ ಕುಟುಂಬಸ್ಥರು ಮಂಟಪದಿಂದ ಪರಾರಿಯಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಮೈಸೂರಿನ ಪ್ರೇಮ್ಚಂದ್ ಎಂಬಾತನೇ ಪರಾರಿಯಾಗಿರುವ ವರನಾಗಿದ್ದು, ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮೈಸೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಯುವಕ ಹಾಗೂ ಸಂತ್ರಸ್ತೆ ಇಬ್ಬರು ಒಳ್ಳೆಯ ಸ್ನೇಹಿತರಾಗಿದ್ದರು. ಇಬ್ಬರ ನಡುವೆಯೂ ಸ್ನೇಹವಾಗಿತ್ತು. ಸಂತ್ರಸ್ತೆ ಬಿಇ ಬಳಿಕ ಎಂಎಸ್ ಮುಗಿಸಿ ಫ್ರಾನ್ಸ್ನಲ್ಲಿ ಕೆಲಸಕ್ಕೆ ಸೇರಿದ್ದಳು. ಆರೋಪಿ ಪ್ರೇಮ್ ಕೂಡ ಪ್ಯಾರೀಸ್ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಈ ವೇಳೆ ಇಬ್ಬರ ನಡುವೆ ಪ್ರೀತಿಯಾಗಿ ಪ್ಯಾರೀಸ್ನಲ್ಲಿ ಸುತ್ತಾಡಿಕೊಂಡಿದ್ದರು.
ಇಬ್ಬರು ಮನೆಯವರು ಒಪ್ಪಿಸಿ ಕಳೆದ ಜುಲೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಕುಟುಂಬಸ್ಥರೆಲ್ಲಾ ಸೇರಿ ಮಾರ್ಚ್.3ರಂದು ಪ್ರೇಮ್ ಹಾಗೂ ಸಂತ್ರಸ್ತೆಯ ಮದುವೆ ದಿನಾಂಕ ನಿಶ್ಚಯ ಮಾಡಿದ್ದರು.
ಮಾರ್ಚ್.1ರಂದು ಮೆಹೆಂದಿ ಹಾಗೂ ಹಳದಿ ಶಾಸ್ತ್ರ ನಡೆದಿತ್ತು. ಈ ವೇಳೆ ಪ್ರೇಮ್ಚಂದ್ ಮನೆಯವರು ಸಂತ್ರಸ್ತೆ ತಂದೆಯ ಬಳಿಯ 50 ಲಕ್ಷ ನಗದು, ಅರ್ಧ ಕೆಜಿ ಚಿನ್ನ ಹಾಗೂ ಬೆಂಜ್ ಕಾರು ನೀಡುವಂತೆ ಬೇಡಿಕೆಯಿಟ್ಟಿದ್ದರು.
ಈ ವೇಳೆ ಸಂತ್ರಸ್ತೆಯ ತಂದೆ ಇದನ್ನು ಕೊಡಲು ಆಗಲ್ಲ. ಮದುವೆಗೆಂದೇ 25 ಲಕ್ಷ ರೂ ಖರ್ಚಾಗಿದೆ ಎಂದು ಹೇಳಿದ್ದರು.
ಈ ವಿಚಾರ ತಿಳಿಯುತ್ತಿದ್ದಂತೆ ಪ್ರೇಮ್ ಹಾಗೂ ಆತನ ಕುಟುಂಬಸ್ಥರು ಮದುವೆ ಮಂಟಪದಿಂದ ಪರಾರಿಯಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸಂತ್ರಸ್ತೆ ತಂದೆ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಂತ್ರಸ್ತೆಯನ್ನು ಮದುವೆಗೂ ಮುನ್ನ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆಂದು ಉಲ್ಲೇಖಿಸಿದ್ದಾರೆ.
ವಾಷಿಂಗ್ಟನ್ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…
ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…
ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…
ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…
ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…
ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…