ರಾಜ್ಯ

ತಾಳಿ ಕಟ್ಟುವ ವೇಳೆಯೇ ವರ ಎಸ್ಕೇಪ್‌: ಕಾರಣ ಇಷ್ಟೇ

ಬೆಂಗಳೂರು/ಮೈಸೂರು: ಮದುವೆ ದಿನವೇ ವರ ಹಾಗೂ ಆತನ ಕುಟುಂಬಸ್ಥರು ಮಂಟಪದಿಂದ ಪರಾರಿಯಾಗಿರುವ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಮೈಸೂರಿನ ಪ್ರೇಮ್‌ಚಂದ್‌ ಎಂಬಾತನೇ ಪರಾರಿಯಾಗಿರುವ ವರನಾಗಿದ್ದು, ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮೈಸೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಯುವಕ ಹಾಗೂ ಸಂತ್ರಸ್ತೆ ಇಬ್ಬರು ಒಳ್ಳೆಯ ಸ್ನೇಹಿತರಾಗಿದ್ದರು. ಇಬ್ಬರ ನಡುವೆಯೂ ಸ್ನೇಹವಾಗಿತ್ತು. ಸಂತ್ರಸ್ತೆ ಬಿಇ ಬಳಿಕ ಎಂಎಸ್‌ ಮುಗಿಸಿ ಫ್ರಾನ್ಸ್‌ನಲ್ಲಿ ಕೆಲಸಕ್ಕೆ ಸೇರಿದ್ದಳು. ಆರೋಪಿ ಪ್ರೇಮ್‌ ಕೂಡ ಪ್ಯಾರೀಸ್‌ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಈ ವೇಳೆ ಇಬ್ಬರ ನಡುವೆ ಪ್ರೀತಿಯಾಗಿ ಪ್ಯಾರೀಸ್‌ನಲ್ಲಿ ಸುತ್ತಾಡಿಕೊಂಡಿದ್ದರು.

ಇಬ್ಬರು ಮನೆಯವರು ಒಪ್ಪಿಸಿ ಕಳೆದ ಜುಲೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಕುಟುಂಬಸ್ಥರೆಲ್ಲಾ ಸೇರಿ ಮಾರ್ಚ್.‌3ರಂದು ಪ್ರೇಮ್‌ ಹಾಗೂ ಸಂತ್ರಸ್ತೆಯ ಮದುವೆ ದಿನಾಂಕ ನಿಶ್ಚಯ ಮಾಡಿದ್ದರು.

ಮಾರ್ಚ್.‌1ರಂದು ಮೆಹೆಂದಿ ಹಾಗೂ ಹಳದಿ ಶಾಸ್ತ್ರ ನಡೆದಿತ್ತು. ಈ ವೇಳೆ ಪ್ರೇಮ್‌ಚಂದ್‌ ಮನೆಯವರು ಸಂತ್ರಸ್ತೆ ತಂದೆಯ ಬಳಿಯ 50 ಲಕ್ಷ ನಗದು, ಅರ್ಧ ಕೆಜಿ ಚಿನ್ನ ಹಾಗೂ ಬೆಂಜ್‌ ಕಾರು ನೀಡುವಂತೆ ಬೇಡಿಕೆಯಿಟ್ಟಿದ್ದರು.

ಈ ವೇಳೆ ಸಂತ್ರಸ್ತೆಯ ತಂದೆ ಇದನ್ನು ಕೊಡಲು ಆಗಲ್ಲ. ಮದುವೆಗೆಂದೇ 25 ಲಕ್ಷ ರೂ ಖರ್ಚಾಗಿದೆ ಎಂದು ಹೇಳಿದ್ದರು.

ಈ ವಿಚಾರ ತಿಳಿಯುತ್ತಿದ್ದಂತೆ ಪ್ರೇಮ್‌ ಹಾಗೂ ಆತನ ಕುಟುಂಬಸ್ಥರು ಮದುವೆ ಮಂಟಪದಿಂದ ಪರಾರಿಯಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸಂತ್ರಸ್ತೆ ತಂದೆ ಉಪ್ಪಾರಪೇಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಸಂತ್ರಸ್ತೆಯನ್ನು ಮದುವೆಗೂ ಮುನ್ನ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆಂದು ಉಲ್ಲೇಖಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

10 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

11 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

11 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

12 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

12 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

12 hours ago