ಬೆಂಗಳೂರು/ಮೈಸೂರು: ಮದುವೆ ದಿನವೇ ವರ ಹಾಗೂ ಆತನ ಕುಟುಂಬಸ್ಥರು ಮಂಟಪದಿಂದ ಪರಾರಿಯಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.
ಮೈಸೂರಿನ ಪ್ರೇಮ್ಚಂದ್ ಎಂಬಾತನೇ ಪರಾರಿಯಾಗಿರುವ ವರನಾಗಿದ್ದು, ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮೈಸೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಯುವಕ ಹಾಗೂ ಸಂತ್ರಸ್ತೆ ಇಬ್ಬರು ಒಳ್ಳೆಯ ಸ್ನೇಹಿತರಾಗಿದ್ದರು. ಇಬ್ಬರ ನಡುವೆಯೂ ಸ್ನೇಹವಾಗಿತ್ತು. ಸಂತ್ರಸ್ತೆ ಬಿಇ ಬಳಿಕ ಎಂಎಸ್ ಮುಗಿಸಿ ಫ್ರಾನ್ಸ್ನಲ್ಲಿ ಕೆಲಸಕ್ಕೆ ಸೇರಿದ್ದಳು. ಆರೋಪಿ ಪ್ರೇಮ್ ಕೂಡ ಪ್ಯಾರೀಸ್ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಈ ವೇಳೆ ಇಬ್ಬರ ನಡುವೆ ಪ್ರೀತಿಯಾಗಿ ಪ್ಯಾರೀಸ್ನಲ್ಲಿ ಸುತ್ತಾಡಿಕೊಂಡಿದ್ದರು.
ಇಬ್ಬರು ಮನೆಯವರು ಒಪ್ಪಿಸಿ ಕಳೆದ ಜುಲೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಕುಟುಂಬಸ್ಥರೆಲ್ಲಾ ಸೇರಿ ಮಾರ್ಚ್.3ರಂದು ಪ್ರೇಮ್ ಹಾಗೂ ಸಂತ್ರಸ್ತೆಯ ಮದುವೆ ದಿನಾಂಕ ನಿಶ್ಚಯ ಮಾಡಿದ್ದರು.
ಮಾರ್ಚ್.1ರಂದು ಮೆಹೆಂದಿ ಹಾಗೂ ಹಳದಿ ಶಾಸ್ತ್ರ ನಡೆದಿತ್ತು. ಈ ವೇಳೆ ಪ್ರೇಮ್ಚಂದ್ ಮನೆಯವರು ಸಂತ್ರಸ್ತೆ ತಂದೆಯ ಬಳಿಯ 50 ಲಕ್ಷ ನಗದು, ಅರ್ಧ ಕೆಜಿ ಚಿನ್ನ ಹಾಗೂ ಬೆಂಜ್ ಕಾರು ನೀಡುವಂತೆ ಬೇಡಿಕೆಯಿಟ್ಟಿದ್ದರು.
ಈ ವೇಳೆ ಸಂತ್ರಸ್ತೆಯ ತಂದೆ ಇದನ್ನು ಕೊಡಲು ಆಗಲ್ಲ. ಮದುವೆಗೆಂದೇ 25 ಲಕ್ಷ ರೂ ಖರ್ಚಾಗಿದೆ ಎಂದು ಹೇಳಿದ್ದರು.
ಈ ವಿಚಾರ ತಿಳಿಯುತ್ತಿದ್ದಂತೆ ಪ್ರೇಮ್ ಹಾಗೂ ಆತನ ಕುಟುಂಬಸ್ಥರು ಮದುವೆ ಮಂಟಪದಿಂದ ಪರಾರಿಯಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸಂತ್ರಸ್ತೆ ತಂದೆ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸಂತ್ರಸ್ತೆಯನ್ನು ಮದುವೆಗೂ ಮುನ್ನ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆಂದು ಉಲ್ಲೇಖಿಸಿದ್ದಾರೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…