ಬೆಂಗಳೂರು: ಸರ್ಕಾರ ಅನರ್ಹರ ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಸಂಬಂಧಿಸಿದಂತೆ ಬಡವರಿಗೆ ಅನ್ಯಾಯ ಮಾಡುತ್ತಿದೆ ಎಂದು ಮೈತ್ರಿ ಪಕ್ಷಗಳ ಆರೋಪದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ನಗರದಲ್ಲಿ ಇಂದು(ನ.19) ಬಿಜೆಪಿ-ಜೆಡಿಎಸ್ ನಾಯಕರ ಆರೋಪಗಳ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು ಈಗಾಗಲೇ ರಾಜ್ಯಾದ್ಯಾಂತ ಬಿಪಿಎಲ್ ಕಾರ್ಡ್ ಕುರಿತು ಸರ್ವೆ ಮಾಡಲಾಗುತ್ತಿದೆ. ಬಳಿಕ ಅನರ್ಹರು ಹೊಂದಿರುವ ಬಿಪಿಎಲ್ ಕಾರ್ಡ್ನ್ನು ರದ್ದುಗೊಳಿಸಲಾಗುತ್ತದೆ ಅಷ್ಟೇ. ಇದರಿಂದ ಬಡವರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಆದರೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾತ್ರ ಈ ವಿಚಾರದಲ್ಲಿ ಮೊಸರಲ್ಲೂ ಕಲ್ಲು ಹುಡುಕುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈಗಾಗಲೇ ಬಿಪಿಎಲ್ ಕಾರ್ಡ್ನ್ನು ಹೊಂದಿರುವ ಕೆಲವು ಸರ್ಕಾರಿ ನೌಕರರು ಸಹ ರೇಷನ್ ಕಾರ್ಡ್ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಬಡವರು ಯಾರು ಎಂಬುದರ ಬಗ್ಗೆ ಸರ್ಕಾರ ಲಿಮಿಟೇಷನ್ ಮಾಡಿದ್ದು, ಕೆಲವರು ಜಿಎಸ್ಟಿ ಟ್ಯಾಕ್ಸ್ ಕಟ್ಟುತ್ತಿದ್ದಾರೆ. ಅದರಲ್ಲಿ ಬಡವರು ಸಹ ಇದ್ದು ಅವರಿಗೆ ಮತ್ತೊಮ್ಮೆ ರೇಷನ್ ಕಾರ್ಡ್ ನೀಡಲು ತೀರ್ಮಾನಿಸಿದ್ದೇವೆ. ಹೀಗಾಗಿ ಯಾವುದೇ ಬಡವರಿಗೂ ಅನ್ಯಾಯವಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಈಗ ಬಿಜೆಪಿ ನಾಯಕರಿಗೂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಯಾವುದೇ ವಿಚಾರಗಳನ್ನು ಚರ್ಚಿಸಲು ಇಲ್ಲ. ಆ ವಿಚಾರವಾಗಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಮ್ಮ ಸರ್ಕಾರದಿಂದ ಅಕ್ಕಿ ಕಾರ್ಯಕ್ರಮ, ಪೆನ್ಷನ್ ಕೊಡೊ ಕಾರ್ಯಕ್ರಮಗಳನ್ನು ಮಾಡಿದೆ. ಅಲ್ಲದೇ ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ಏನೇನು ಅನ್ಯಾಯ ಮಾಡಬೇಕೋ ಅಷ್ಟು ಅನ್ಯಾಯ ಮಾಡಿ ಒಂದು ಕಾರ್ಯಕ್ರಮಗಳನ್ನು ಸಹ ನೀಡಲಿಲ್ಲ. ಆಗಿನ ಕಾಲದಲ್ಲಿ ಅವರೆಲ್ಲರೂ ಯಾವುದೇ ಬಡವರಿಗೂ ಸಹಾಯ ಮಾಡಿಲ್ಲ. ಆದರೆ ಇದೀಗ ಮೈತ್ರಿ ಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಏನೇನೋ ಆರೋಪ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…