ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ರಾಜ್ಯದಲ್ಲಿ ಅನರ್ಹರು ಪಡೆದಿರುವ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತಿದ್ದು, ಇದಕ್ಕೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿವೆ.
ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಯೋಜನೆಗಳು ನಿಂತುಹೋಗಿವೆ ಎಂದು ವಿರೋಧ ಪಕ್ಷದ ನಾಯಕರು ಪದೇ ಪದೇ ಆರೋಪಿಸುತ್ತಿರುವ ಬೆನ್ನಲ್ಲೇ ಈಗ ಬಿಪಿಎಲ್ ಕಾರ್ಡ್ ರದ್ದು ಮಾಡುವ ಪ್ರಕ್ರಿಯೆ ನಡೆಸಲಾಗುತ್ತಿದೆ.
ಬಿಪಿಎಲ್ ಕಾರ್ಡ್ ರದ್ದು ಪ್ರಕ್ರಿಯೆ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕಾರ್ಡ್ ರದ್ದತಿ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅನರ್ಹ ಕಾರ್ಡ್ಗಳನ್ನು ರದ್ದು ಮಾಡಲು ಸೂಚನೆ ನೀಡಲಾಗಿದೆ. ಅದರಲ್ಲಿ ಕೆಲವು ಲೋಪಗಳಾಗಿದ್ದರೆ ಪರಿಶೀಲನೆ ನಡೆಸಲಾಗುತ್ತದೆ ಹಾಗೂ ಅಧಿಕಾರಿಗಳು ಲೋಪ ಮಾಡಿದ್ದರೆ ಅದನ್ನು ಸರಿಪಡಿಸುತ್ತಾರೆ ಎಂದು ಸ್ಪಷ್ಟಪಡಿಸಿದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…