ಬೆಂಗಳೂರು: ರಾಜ್ಯದಲ್ಲಿ 1, 02, 509 ಬಿಪಿಎಲ್ ಕಾರ್ಡ್ಗಳನ್ನು ಅನರ್ಹಗೊಳಿಸಲಾಗಿದೆ. ಆದರೆ ಅರ್ಹರ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ಗೆ ಅರ್ಹರಿರುವ ಯಾವುದೇ ಕಾರ್ಡ್ಗಳನ್ನು ರದ್ದುಪಡಿಸಿಲ್ಲ. ಆದರೆ ಆದಾಯ ತೆರಿಗೆದಾರರ ಮಾಹಿತಿ ಪಡೆದು ಕಾರ್ಡ್ ರದ್ದು ಮಾಡಲಾಗಿದೆಯಷ್ಟೇ. ಅದರಲ್ಲಿ ಸರ್ಕಾರಿ ನೌಕರರನ್ನು ಪರಿಶೀಲಿಸಿ ಬಿಪಿಎಲ್ನಿಂದ ಎಪಿಎಲ್ ಕಾರ್ಡ್ಗೆ ವರ್ಗಾವಣೆ ಮಾಡಲಾಗಿದೆ ಎಂದಿದ್ದಾರೆ.
ಇನ್ನು ರಾಜ್ಯದಲ್ಲಿ ಶೇ.66% ರಷ್ಟು ಬಿಪಿಎಲ್ ಕಾರ್ಡ್ಗಳಿದ್ದು, ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ಪರಿಶೀಲಿಸಿ ಪರಿಷ್ಕರಣೆ ಮಾಡಲಾಗಿದೆ. ಒಂದು ವೇಳೆ ಅದರಲ್ಲಿ ಬಿಪಿಎಲ್ ಕಾರ್ಡ್ಗೆ ಅರ್ಹರಿದ್ದು, ಎಪಿಎಲ್ ಕಾರ್ಡ್ಗೆ ಸೇರ್ಪಡೆಯಾಗಿದ್ದಾರೆ ಮಾತ್ರ ಅಂತಹವರಿಗೆ ಬಿಪಿಎಲ್ ಕಾರ್ಡ್ ಹಂಚಿಕೆ ಮಾಡುತ್ತೇವೆ. ಅದರಲ್ಲಿ ಅನರ್ಹವಾಗಿರುವ ಬಿಪಿಎಲ್ ಕಾರ್ಡ್ಗಳನ್ನು ತಾತ್ಕಲಿಕವಾಗಿ ಅಮಾನತ್ತು ಮಾಡಲಾಗಿದೆ. ಆದಾಯ ತೆರಿಗೆ ಕಟ್ಟುವವರು ಮತ್ತು ಸರ್ಕಾರಿ ನೌಕರರನ್ನು ಹೊರತುಪಡಿಸಿ ಉಳಿದವರೆಲ್ಲರಿಗೂ ಬಿಪಿಎಲ್ ಕಾರ್ಡ್ನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ದಾರರಲ್ಲಿ 98,473 ಜನ ತೆರಿಗೆದಾರರು ಹಾಗೂ 4,036 ಸರ್ಕಾರಿ ನೌಕರರಿದ್ದಾರೆ. ಹೀಗಾಗಿ ಒಟ್ಟು 1,02,509 ಕಾರ್ಡ್ಗಳನ್ನು ಅನರ್ಹಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…