Categories: ರಾಜ್ಯ

ಬಿಪಿಎಲ್‌ ಕಾರ್ಡ್‌ ಅನರ್ಹ ವಿವಾದ: ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ 1, 02, 509 ಬಿಪಿಎಲ್‌ ಕಾರ್ಡ್‌ಗಳನ್ನು ಅನರ್ಹಗೊಳಿಸಲಾಗಿದೆ. ಆದರೆ ಅರ್ಹರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಪಿಎಲ್‌ ಕಾರ್ಡ್‌ಗೆ ಅರ್ಹರಿರುವ ಯಾವುದೇ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ. ಆದರೆ ಆದಾಯ ತೆರಿಗೆದಾರರ ಮಾಹಿತಿ ಪಡೆದು ಕಾರ್ಡ್‌ ರದ್ದು ಮಾಡಲಾಗಿದೆಯಷ್ಟೇ. ಅದರಲ್ಲಿ ಸರ್ಕಾರಿ ನೌಕರರನ್ನು ಪರಿಶೀಲಿಸಿ ಬಿಪಿಎಲ್‌ನಿಂದ ಎಪಿಎಲ್‌ ಕಾರ್ಡ್‌ಗೆ ವರ್ಗಾವಣೆ ಮಾಡಲಾಗಿದೆ ಎಂದಿದ್ದಾರೆ.

ಇನ್ನು ರಾಜ್ಯದಲ್ಲಿ ಶೇ.66% ರಷ್ಟು ಬಿಪಿಎಲ್‌ ಕಾರ್ಡ್‌ಗಳಿದ್ದು, ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ಪರಿಶೀಲಿಸಿ ಪರಿಷ್ಕರಣೆ ಮಾಡಲಾಗಿದೆ. ಒಂದು ವೇಳೆ ಅದರಲ್ಲಿ ಬಿಪಿಎಲ್‌ ಕಾರ್ಡ್‌ಗೆ ಅರ್ಹರಿದ್ದು, ಎಪಿಎಲ್‌ ಕಾರ್ಡ್‌ಗೆ ಸೇರ್ಪಡೆಯಾಗಿದ್ದಾರೆ ಮಾತ್ರ ಅಂತಹವರಿಗೆ ಬಿಪಿಎಲ್‌ ಕಾರ್ಡ್‌ ಹಂಚಿಕೆ ಮಾಡುತ್ತೇವೆ. ಅದರಲ್ಲಿ ಅನರ್ಹವಾಗಿರುವ ಬಿಪಿಎಲ್‌ ಕಾರ್ಡ್‌ಗಳನ್ನು ತಾತ್ಕಲಿಕವಾಗಿ ಅಮಾನತ್ತು ಮಾಡಲಾಗಿದೆ. ಆದಾಯ ತೆರಿಗೆ ಕಟ್ಟುವವರು ಮತ್ತು ಸರ್ಕಾರಿ ನೌಕರರನ್ನು ಹೊರತುಪಡಿಸಿ ಉಳಿದವರೆಲ್ಲರಿಗೂ ಬಿಪಿಎಲ್‌ ಕಾರ್ಡ್‌ನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಬಿಪಿಎಲ್‌ ಕಾರ್ಡ್‌ದಾರರಲ್ಲಿ 98,473 ಜನ ತೆರಿಗೆದಾರರು ಹಾಗೂ 4,036 ಸರ್ಕಾರಿ ನೌಕರರಿದ್ದಾರೆ. ಹೀಗಾಗಿ ಒಟ್ಟು 1,02,509 ಕಾರ್ಡ್‌ಗಳನ್ನು ಅನರ್ಹಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

10 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

14 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

18 hours ago