Categories: ರಾಜ್ಯ

ಬಿಪಿಎಲ್‌ ಕಾರ್ಡ್‌ ಅನರ್ಹ ವಿವಾದ: ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ 1, 02, 509 ಬಿಪಿಎಲ್‌ ಕಾರ್ಡ್‌ಗಳನ್ನು ಅನರ್ಹಗೊಳಿಸಲಾಗಿದೆ. ಆದರೆ ಅರ್ಹರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಪಿಎಲ್‌ ಕಾರ್ಡ್‌ಗೆ ಅರ್ಹರಿರುವ ಯಾವುದೇ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ. ಆದರೆ ಆದಾಯ ತೆರಿಗೆದಾರರ ಮಾಹಿತಿ ಪಡೆದು ಕಾರ್ಡ್‌ ರದ್ದು ಮಾಡಲಾಗಿದೆಯಷ್ಟೇ. ಅದರಲ್ಲಿ ಸರ್ಕಾರಿ ನೌಕರರನ್ನು ಪರಿಶೀಲಿಸಿ ಬಿಪಿಎಲ್‌ನಿಂದ ಎಪಿಎಲ್‌ ಕಾರ್ಡ್‌ಗೆ ವರ್ಗಾವಣೆ ಮಾಡಲಾಗಿದೆ ಎಂದಿದ್ದಾರೆ.

ಇನ್ನು ರಾಜ್ಯದಲ್ಲಿ ಶೇ.66% ರಷ್ಟು ಬಿಪಿಎಲ್‌ ಕಾರ್ಡ್‌ಗಳಿದ್ದು, ಕೇಂದ್ರ ಸರ್ಕಾರದ ಮಾನದಂಡಗಳ ಅನ್ವಯ ಪರಿಶೀಲಿಸಿ ಪರಿಷ್ಕರಣೆ ಮಾಡಲಾಗಿದೆ. ಒಂದು ವೇಳೆ ಅದರಲ್ಲಿ ಬಿಪಿಎಲ್‌ ಕಾರ್ಡ್‌ಗೆ ಅರ್ಹರಿದ್ದು, ಎಪಿಎಲ್‌ ಕಾರ್ಡ್‌ಗೆ ಸೇರ್ಪಡೆಯಾಗಿದ್ದಾರೆ ಮಾತ್ರ ಅಂತಹವರಿಗೆ ಬಿಪಿಎಲ್‌ ಕಾರ್ಡ್‌ ಹಂಚಿಕೆ ಮಾಡುತ್ತೇವೆ. ಅದರಲ್ಲಿ ಅನರ್ಹವಾಗಿರುವ ಬಿಪಿಎಲ್‌ ಕಾರ್ಡ್‌ಗಳನ್ನು ತಾತ್ಕಲಿಕವಾಗಿ ಅಮಾನತ್ತು ಮಾಡಲಾಗಿದೆ. ಆದಾಯ ತೆರಿಗೆ ಕಟ್ಟುವವರು ಮತ್ತು ಸರ್ಕಾರಿ ನೌಕರರನ್ನು ಹೊರತುಪಡಿಸಿ ಉಳಿದವರೆಲ್ಲರಿಗೂ ಬಿಪಿಎಲ್‌ ಕಾರ್ಡ್‌ನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಬಿಪಿಎಲ್‌ ಕಾರ್ಡ್‌ದಾರರಲ್ಲಿ 98,473 ಜನ ತೆರಿಗೆದಾರರು ಹಾಗೂ 4,036 ಸರ್ಕಾರಿ ನೌಕರರಿದ್ದಾರೆ. ಹೀಗಾಗಿ ಒಟ್ಟು 1,02,509 ಕಾರ್ಡ್‌ಗಳನ್ನು ಅನರ್ಹಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

4 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

4 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

4 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

4 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

13 hours ago