ರಾಜ್ಯ

ಬಿಪಿಎಲ್‌ ಕಾರ್ಡ್‌ | ಅನರ್ಹರ ಪತ್ತೆಗೆ ಹೊಸ ತಂತ್ರಾಂಶ

ಬೆಂಗಳೂರು : ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಅನರ್ಹ ಬಡತನ ರೇಖೆ ಕೆಳಗಿನ (ಬಿಪಿಎಲ್‌) ಪಡಿತರ ಕಾರ್ಡ್‌ಗಳ ರದ್ದತಿ ಸರಕಾರಕ್ಕೆ ಸವಾಲಾಗಿದೆ. ಆದರೆ, ಮುಂಬರುವ ದಿನಗಳಲ್ಲಿ ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಸಿಗದಂತೆ ಮತ್ತು ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಸರಕಾರ ಮುಂದಾಗಿದೆ.

ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ವರದಿ ಮತ್ತು ಆಹಾರ ಇಲಾಖೆ ತನ್ನದೇ ಆದ ಪರಿಶೀಲನಾ ಮಾರ್ಗದಲ್ಲಿ 10.09 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ಅನರ್ಹರು ಪಡೆದಿದ್ದಾರೆ ಎಂಬುದನ್ನು ಖಚಿತಪಡಿಸಿ ಕೊಂಡಿದೆ. ಬಳಿಕ ಇವುಗಳನ್ನು ಮತ್ತೆ ಪರಾಮರ್ಶೆ ಮಾಡಿ ನಿಜವಾದ ಅನರ್ಹರನ್ನು ಗುರುತಿಸಲು ಆಹಾರ ಇಲಾಖೆ ಕಾರ್ಯೋನ್ಮುಖವಾಗಿದೆ.

ಕರ್ನಾಟಕವು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮತ್ತು ಅಂತ್ಯೋದಯ ಅನ್ನ ಯೋಜನೆ (ಎಎವೈ) ಫಲಾನುಭವಿಗಳಿಗಾಗಿ 1.09 ಕೋಟಿಗೂ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿದೆ. ಪ್ರಸ್ತುತ ಸರ್ಕಾರವು ಬಿಪಿಎಲ್‌ ಕಾರ್ಡ್‌ದಾರರ ಅರ್ಹತೆಯನ್ನು ಪರಿಶೀಲನೆಗೆ ಕ್ರಮವಹಿಸಿದ್ದು, ಅನರ್ಹ ಕಾರ್ಡ್‌ದಾರರನ್ನು ತೆಗೆದುಹಾಕುವ ಕಾರ್ಯಕ್ಕೆ ಚಾಲನೆ ನೀಡಿದೆ.

ಇದನ್ನೂ ಓದಿ :-ಕವಿ ವಿಶ್ವಮಾನವ ಪ್ರಜ್ಞೆ ಹೊಂದಲಿ : ನಾಡಗೀತೆಗೆ ನೂರರ ಸಂಭ್ರಮದಲ್ಲಿ ಪ್ರೊ.ಅರವಿಂದ ಮಾಲಗತ್ತಿ ಸಲಹೆ

ನೈಜ ಹಾಗೂ ಅನರ್ಹ ಫಲಾನುಭವಿಗಳ ಪತ್ತೆ ಹೇಗೆ?
ಮೊದಲ ಹಂತದಲ್ಲಿ ನಾನಾ ಇಲಾಖೆಗಳ ತಂತ್ರಾಂಶಗಳೊಂದಿಗೆ ಆಹಾರ ಇಲಾಖೆಯು ತನ್ನ ದತ್ತಾಂಶಗಳನ್ನು ಸೇರಿಸಿ ಸಂಸ್ಕರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಇದಲ್ಲದೇ ಕೇಂದ್ರ ಸಿಟಿಡಿಬಿ ಕಳಿಸಿದ ಅರ್ನಹರ ಪಟ್ಟಿಯನ್ನು ತಾಳೆ ಹಾಕಲಾಗುತ್ತಿದೆ. ಇದರ ಆಧಾರದ ಮೇಲೆ ಜಿಲ್ಲಾವಾರು ಅನರ್ಹರ ಪಟ್ಟಿ ಸಿದ್ಧಪಡಿಸಿದೆ. ಅವನ್ನು ಜಿಲ್ಲೆಗಳ ಮುಖ್ಯಸ್ಥರಿಗೆ ಕಳುಹಿಸಿ, ಮರು ಪರಿಶೀಲನೆ ಕಾರ್ಯ ಭರದಿಂದ ಸಾಗಿದೆ. ಈ ಮೂಲಕ ನೈಜ ಅನರ್ಹರ ಪಟ್ಟಿ ಸಿದ್ಧಡಿಸಿ ಸರಕಾರದ ನಿರ್ದೇಶನದಂತೆ ಎಪಿಎಲ್‌ಗೆ ಪರಿವರ್ತಿಸಲಾಗುವುದು ಎಂದು ಆಹಾರ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅನರ್ಹರ ಬಿಪಿಎಲ್‌ ತಡೆಗೆ ಸರ್ಕಾರದ ಕ್ರಮಗಳೇನು?
ಅನರ್ಹರು ಬಿಪಿಎಲ್‌ ಪಡಿತರ ಚೀಟಿ ಪಡೆಯುವುದನ್ನು ತಪ್ಪಿಸಲು ಪಹಣಿ, ವಾಹನ ನೋಂದಣಿ, ನೌಕರರ ವಿವರವನ್ನು ಪಡಿತರ ಚೀಟಿ ದತ್ತಾಂಶಗಳ ಜತೆ ಬೆಸೆಯಬೇಕು ಎಂದು ಹಳಿಯಾಳ ಶಾಸಕ ಆರ್‌.ವಿ.ದೇಶಪಾಂಡೆ ಅಧ್ಯಕ್ಷತೆಯ ಆಡಳಿತ ಸುಧಾರಣಾ ಆಯೋಗ-2 ಸರಕಾರಕ್ಕೆ ಶಿಫಾರಸು ಮಾಡಿದೆ.
ಸರಕಾರ ಆಯೋಗದ ಶಿಫಾರಸುಗಳನ್ನು ಬಿಪಿಎಲ್‌ ಕಾರ್ಡ್‌ಗಳಿಗೆ ಅನ್ವಯಿಸಲು ನಿರ್ಧರಿಸಿದೆ.
ಮೂರು ಹೆಕ್ಟೇರ್‌ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿದ್ದರೆ, ಬಿಪಿಎಲ್‌ ಪಡಿತರ ಚೀಟಿಗೆ ಅವಕಾಶ ಇಲ್ಲ.

ಕೃಷಿ ಭೂಮಿಯ ದತ್ತಾಂಶಗಳನ್ನು ಪಡಿತರ ಚೀಟಿಗಳ ದತ್ತಾಂಶಗಳ ಜತೆ ಸಮೀಕರಿಸಿದರೆ ಕೃಷಿ ಭೂಮಿ ಹೊಂದಿರುವವರ ವಿವರವನ್ನು ಪರಿಶೀಲಿಸಲು ಸುಲಭವಾಗುತ್ತದೆ.
ಇದೇ ರೀತಿ ಎಚ್‌ಆರ್‌ಎಂಎಸ್‌ ತಂತ್ರಾಂಶದಿಂದ ಸರಕಾರಿ ನೌಕರರ ಮಾಹಿತಿ, ವಾಹನ ನೋಂದಣಿ ದತ್ತಾಂಶ, ಆಸ್ತಿ ನೋಂದಣಿ ವಿವರವನ್ನು ಆಹಾರ ಇಲಾಖೆಯ ಪಡಿತರ ವ್ಯವಸ್ಥೆಗೆ ಜೋಡಿಸಬೇಕು ಎಂದು ಆಯೋಗ ಶಿಫಾರಸು ಮಾಡಿದೆ.ಇದಲ್ಲದೇ ಆದಾಯ ಪ್ರಮಾಣಪತ್ರ ವಿತರಣೆಗೆ ಏಕರೂಪದ ವಿಧಾನ ಅನುಸರಿಸುವಂತೆಯೂ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

57 mins ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

1 hour ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

2 hours ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

3 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

3 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

6 hours ago