ರಾಜ್ಯ

ಬಿಪಿಎಲ್‌ ಕಾರ್ಡ್‌ | ಅನರ್ಹರ ಪತ್ತೆಗೆ ಹೊಸ ತಂತ್ರಾಂಶ

ಬೆಂಗಳೂರು : ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಅನರ್ಹ ಬಡತನ ರೇಖೆ ಕೆಳಗಿನ (ಬಿಪಿಎಲ್‌) ಪಡಿತರ ಕಾರ್ಡ್‌ಗಳ ರದ್ದತಿ ಸರಕಾರಕ್ಕೆ ಸವಾಲಾಗಿದೆ. ಆದರೆ, ಮುಂಬರುವ ದಿನಗಳಲ್ಲಿ ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಸಿಗದಂತೆ ಮತ್ತು ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಸರಕಾರ ಮುಂದಾಗಿದೆ.

ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ವರದಿ ಮತ್ತು ಆಹಾರ ಇಲಾಖೆ ತನ್ನದೇ ಆದ ಪರಿಶೀಲನಾ ಮಾರ್ಗದಲ್ಲಿ 10.09 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ಅನರ್ಹರು ಪಡೆದಿದ್ದಾರೆ ಎಂಬುದನ್ನು ಖಚಿತಪಡಿಸಿ ಕೊಂಡಿದೆ. ಬಳಿಕ ಇವುಗಳನ್ನು ಮತ್ತೆ ಪರಾಮರ್ಶೆ ಮಾಡಿ ನಿಜವಾದ ಅನರ್ಹರನ್ನು ಗುರುತಿಸಲು ಆಹಾರ ಇಲಾಖೆ ಕಾರ್ಯೋನ್ಮುಖವಾಗಿದೆ.

ಕರ್ನಾಟಕವು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮತ್ತು ಅಂತ್ಯೋದಯ ಅನ್ನ ಯೋಜನೆ (ಎಎವೈ) ಫಲಾನುಭವಿಗಳಿಗಾಗಿ 1.09 ಕೋಟಿಗೂ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿದೆ. ಪ್ರಸ್ತುತ ಸರ್ಕಾರವು ಬಿಪಿಎಲ್‌ ಕಾರ್ಡ್‌ದಾರರ ಅರ್ಹತೆಯನ್ನು ಪರಿಶೀಲನೆಗೆ ಕ್ರಮವಹಿಸಿದ್ದು, ಅನರ್ಹ ಕಾರ್ಡ್‌ದಾರರನ್ನು ತೆಗೆದುಹಾಕುವ ಕಾರ್ಯಕ್ಕೆ ಚಾಲನೆ ನೀಡಿದೆ.

ಇದನ್ನೂ ಓದಿ :-ಕವಿ ವಿಶ್ವಮಾನವ ಪ್ರಜ್ಞೆ ಹೊಂದಲಿ : ನಾಡಗೀತೆಗೆ ನೂರರ ಸಂಭ್ರಮದಲ್ಲಿ ಪ್ರೊ.ಅರವಿಂದ ಮಾಲಗತ್ತಿ ಸಲಹೆ

ನೈಜ ಹಾಗೂ ಅನರ್ಹ ಫಲಾನುಭವಿಗಳ ಪತ್ತೆ ಹೇಗೆ?
ಮೊದಲ ಹಂತದಲ್ಲಿ ನಾನಾ ಇಲಾಖೆಗಳ ತಂತ್ರಾಂಶಗಳೊಂದಿಗೆ ಆಹಾರ ಇಲಾಖೆಯು ತನ್ನ ದತ್ತಾಂಶಗಳನ್ನು ಸೇರಿಸಿ ಸಂಸ್ಕರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಇದಲ್ಲದೇ ಕೇಂದ್ರ ಸಿಟಿಡಿಬಿ ಕಳಿಸಿದ ಅರ್ನಹರ ಪಟ್ಟಿಯನ್ನು ತಾಳೆ ಹಾಕಲಾಗುತ್ತಿದೆ. ಇದರ ಆಧಾರದ ಮೇಲೆ ಜಿಲ್ಲಾವಾರು ಅನರ್ಹರ ಪಟ್ಟಿ ಸಿದ್ಧಪಡಿಸಿದೆ. ಅವನ್ನು ಜಿಲ್ಲೆಗಳ ಮುಖ್ಯಸ್ಥರಿಗೆ ಕಳುಹಿಸಿ, ಮರು ಪರಿಶೀಲನೆ ಕಾರ್ಯ ಭರದಿಂದ ಸಾಗಿದೆ. ಈ ಮೂಲಕ ನೈಜ ಅನರ್ಹರ ಪಟ್ಟಿ ಸಿದ್ಧಡಿಸಿ ಸರಕಾರದ ನಿರ್ದೇಶನದಂತೆ ಎಪಿಎಲ್‌ಗೆ ಪರಿವರ್ತಿಸಲಾಗುವುದು ಎಂದು ಆಹಾರ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅನರ್ಹರ ಬಿಪಿಎಲ್‌ ತಡೆಗೆ ಸರ್ಕಾರದ ಕ್ರಮಗಳೇನು?
ಅನರ್ಹರು ಬಿಪಿಎಲ್‌ ಪಡಿತರ ಚೀಟಿ ಪಡೆಯುವುದನ್ನು ತಪ್ಪಿಸಲು ಪಹಣಿ, ವಾಹನ ನೋಂದಣಿ, ನೌಕರರ ವಿವರವನ್ನು ಪಡಿತರ ಚೀಟಿ ದತ್ತಾಂಶಗಳ ಜತೆ ಬೆಸೆಯಬೇಕು ಎಂದು ಹಳಿಯಾಳ ಶಾಸಕ ಆರ್‌.ವಿ.ದೇಶಪಾಂಡೆ ಅಧ್ಯಕ್ಷತೆಯ ಆಡಳಿತ ಸುಧಾರಣಾ ಆಯೋಗ-2 ಸರಕಾರಕ್ಕೆ ಶಿಫಾರಸು ಮಾಡಿದೆ.
ಸರಕಾರ ಆಯೋಗದ ಶಿಫಾರಸುಗಳನ್ನು ಬಿಪಿಎಲ್‌ ಕಾರ್ಡ್‌ಗಳಿಗೆ ಅನ್ವಯಿಸಲು ನಿರ್ಧರಿಸಿದೆ.
ಮೂರು ಹೆಕ್ಟೇರ್‌ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿದ್ದರೆ, ಬಿಪಿಎಲ್‌ ಪಡಿತರ ಚೀಟಿಗೆ ಅವಕಾಶ ಇಲ್ಲ.

ಕೃಷಿ ಭೂಮಿಯ ದತ್ತಾಂಶಗಳನ್ನು ಪಡಿತರ ಚೀಟಿಗಳ ದತ್ತಾಂಶಗಳ ಜತೆ ಸಮೀಕರಿಸಿದರೆ ಕೃಷಿ ಭೂಮಿ ಹೊಂದಿರುವವರ ವಿವರವನ್ನು ಪರಿಶೀಲಿಸಲು ಸುಲಭವಾಗುತ್ತದೆ.
ಇದೇ ರೀತಿ ಎಚ್‌ಆರ್‌ಎಂಎಸ್‌ ತಂತ್ರಾಂಶದಿಂದ ಸರಕಾರಿ ನೌಕರರ ಮಾಹಿತಿ, ವಾಹನ ನೋಂದಣಿ ದತ್ತಾಂಶ, ಆಸ್ತಿ ನೋಂದಣಿ ವಿವರವನ್ನು ಆಹಾರ ಇಲಾಖೆಯ ಪಡಿತರ ವ್ಯವಸ್ಥೆಗೆ ಜೋಡಿಸಬೇಕು ಎಂದು ಆಯೋಗ ಶಿಫಾರಸು ಮಾಡಿದೆ.ಇದಲ್ಲದೇ ಆದಾಯ ಪ್ರಮಾಣಪತ್ರ ವಿತರಣೆಗೆ ಏಕರೂಪದ ವಿಧಾನ ಅನುಸರಿಸುವಂತೆಯೂ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

12 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

12 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

12 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

12 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

12 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

12 hours ago