ರಾಜ್ಯ

ಬಿಪಿಎಲ್‌ ಕಾರ್ಡ್‌ | ಅನರ್ಹರ ಪತ್ತೆಗೆ ಹೊಸ ತಂತ್ರಾಂಶ

ಬೆಂಗಳೂರು : ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಅನರ್ಹ ಬಡತನ ರೇಖೆ ಕೆಳಗಿನ (ಬಿಪಿಎಲ್‌) ಪಡಿತರ ಕಾರ್ಡ್‌ಗಳ ರದ್ದತಿ ಸರಕಾರಕ್ಕೆ ಸವಾಲಾಗಿದೆ. ಆದರೆ, ಮುಂಬರುವ ದಿನಗಳಲ್ಲಿ ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಸಿಗದಂತೆ ಮತ್ತು ಅಕ್ರಮ ತಡೆಗೆ ಹೊಸ ತಂತ್ರಾಂಶ ಅಳವಡಿಕೆಗೆ ಸರಕಾರ ಮುಂದಾಗಿದೆ.

ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ವರದಿ ಮತ್ತು ಆಹಾರ ಇಲಾಖೆ ತನ್ನದೇ ಆದ ಪರಿಶೀಲನಾ ಮಾರ್ಗದಲ್ಲಿ 10.09 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ಅನರ್ಹರು ಪಡೆದಿದ್ದಾರೆ ಎಂಬುದನ್ನು ಖಚಿತಪಡಿಸಿ ಕೊಂಡಿದೆ. ಬಳಿಕ ಇವುಗಳನ್ನು ಮತ್ತೆ ಪರಾಮರ್ಶೆ ಮಾಡಿ ನಿಜವಾದ ಅನರ್ಹರನ್ನು ಗುರುತಿಸಲು ಆಹಾರ ಇಲಾಖೆ ಕಾರ್ಯೋನ್ಮುಖವಾಗಿದೆ.

ಕರ್ನಾಟಕವು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಮತ್ತು ಅಂತ್ಯೋದಯ ಅನ್ನ ಯೋಜನೆ (ಎಎವೈ) ಫಲಾನುಭವಿಗಳಿಗಾಗಿ 1.09 ಕೋಟಿಗೂ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿದೆ. ಪ್ರಸ್ತುತ ಸರ್ಕಾರವು ಬಿಪಿಎಲ್‌ ಕಾರ್ಡ್‌ದಾರರ ಅರ್ಹತೆಯನ್ನು ಪರಿಶೀಲನೆಗೆ ಕ್ರಮವಹಿಸಿದ್ದು, ಅನರ್ಹ ಕಾರ್ಡ್‌ದಾರರನ್ನು ತೆಗೆದುಹಾಕುವ ಕಾರ್ಯಕ್ಕೆ ಚಾಲನೆ ನೀಡಿದೆ.

ಇದನ್ನೂ ಓದಿ :-ಕವಿ ವಿಶ್ವಮಾನವ ಪ್ರಜ್ಞೆ ಹೊಂದಲಿ : ನಾಡಗೀತೆಗೆ ನೂರರ ಸಂಭ್ರಮದಲ್ಲಿ ಪ್ರೊ.ಅರವಿಂದ ಮಾಲಗತ್ತಿ ಸಲಹೆ

ನೈಜ ಹಾಗೂ ಅನರ್ಹ ಫಲಾನುಭವಿಗಳ ಪತ್ತೆ ಹೇಗೆ?
ಮೊದಲ ಹಂತದಲ್ಲಿ ನಾನಾ ಇಲಾಖೆಗಳ ತಂತ್ರಾಂಶಗಳೊಂದಿಗೆ ಆಹಾರ ಇಲಾಖೆಯು ತನ್ನ ದತ್ತಾಂಶಗಳನ್ನು ಸೇರಿಸಿ ಸಂಸ್ಕರಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಇದಲ್ಲದೇ ಕೇಂದ್ರ ಸಿಟಿಡಿಬಿ ಕಳಿಸಿದ ಅರ್ನಹರ ಪಟ್ಟಿಯನ್ನು ತಾಳೆ ಹಾಕಲಾಗುತ್ತಿದೆ. ಇದರ ಆಧಾರದ ಮೇಲೆ ಜಿಲ್ಲಾವಾರು ಅನರ್ಹರ ಪಟ್ಟಿ ಸಿದ್ಧಪಡಿಸಿದೆ. ಅವನ್ನು ಜಿಲ್ಲೆಗಳ ಮುಖ್ಯಸ್ಥರಿಗೆ ಕಳುಹಿಸಿ, ಮರು ಪರಿಶೀಲನೆ ಕಾರ್ಯ ಭರದಿಂದ ಸಾಗಿದೆ. ಈ ಮೂಲಕ ನೈಜ ಅನರ್ಹರ ಪಟ್ಟಿ ಸಿದ್ಧಡಿಸಿ ಸರಕಾರದ ನಿರ್ದೇಶನದಂತೆ ಎಪಿಎಲ್‌ಗೆ ಪರಿವರ್ತಿಸಲಾಗುವುದು ಎಂದು ಆಹಾರ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅನರ್ಹರ ಬಿಪಿಎಲ್‌ ತಡೆಗೆ ಸರ್ಕಾರದ ಕ್ರಮಗಳೇನು?
ಅನರ್ಹರು ಬಿಪಿಎಲ್‌ ಪಡಿತರ ಚೀಟಿ ಪಡೆಯುವುದನ್ನು ತಪ್ಪಿಸಲು ಪಹಣಿ, ವಾಹನ ನೋಂದಣಿ, ನೌಕರರ ವಿವರವನ್ನು ಪಡಿತರ ಚೀಟಿ ದತ್ತಾಂಶಗಳ ಜತೆ ಬೆಸೆಯಬೇಕು ಎಂದು ಹಳಿಯಾಳ ಶಾಸಕ ಆರ್‌.ವಿ.ದೇಶಪಾಂಡೆ ಅಧ್ಯಕ್ಷತೆಯ ಆಡಳಿತ ಸುಧಾರಣಾ ಆಯೋಗ-2 ಸರಕಾರಕ್ಕೆ ಶಿಫಾರಸು ಮಾಡಿದೆ.
ಸರಕಾರ ಆಯೋಗದ ಶಿಫಾರಸುಗಳನ್ನು ಬಿಪಿಎಲ್‌ ಕಾರ್ಡ್‌ಗಳಿಗೆ ಅನ್ವಯಿಸಲು ನಿರ್ಧರಿಸಿದೆ.
ಮೂರು ಹೆಕ್ಟೇರ್‌ಗಿಂತ ಹೆಚ್ಚು ಕೃಷಿ ಭೂಮಿ ಹೊಂದಿದ್ದರೆ, ಬಿಪಿಎಲ್‌ ಪಡಿತರ ಚೀಟಿಗೆ ಅವಕಾಶ ಇಲ್ಲ.

ಕೃಷಿ ಭೂಮಿಯ ದತ್ತಾಂಶಗಳನ್ನು ಪಡಿತರ ಚೀಟಿಗಳ ದತ್ತಾಂಶಗಳ ಜತೆ ಸಮೀಕರಿಸಿದರೆ ಕೃಷಿ ಭೂಮಿ ಹೊಂದಿರುವವರ ವಿವರವನ್ನು ಪರಿಶೀಲಿಸಲು ಸುಲಭವಾಗುತ್ತದೆ.
ಇದೇ ರೀತಿ ಎಚ್‌ಆರ್‌ಎಂಎಸ್‌ ತಂತ್ರಾಂಶದಿಂದ ಸರಕಾರಿ ನೌಕರರ ಮಾಹಿತಿ, ವಾಹನ ನೋಂದಣಿ ದತ್ತಾಂಶ, ಆಸ್ತಿ ನೋಂದಣಿ ವಿವರವನ್ನು ಆಹಾರ ಇಲಾಖೆಯ ಪಡಿತರ ವ್ಯವಸ್ಥೆಗೆ ಜೋಡಿಸಬೇಕು ಎಂದು ಆಯೋಗ ಶಿಫಾರಸು ಮಾಡಿದೆ.ಇದಲ್ಲದೇ ಆದಾಯ ಪ್ರಮಾಣಪತ್ರ ವಿತರಣೆಗೆ ಏಕರೂಪದ ವಿಧಾನ ಅನುಸರಿಸುವಂತೆಯೂ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

28 mins ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

1 hour ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

2 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

3 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

7 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

7 hours ago