Categories: ರಾಜ್ಯ

ಬಿಪಿಎಲ್‌ ಕಾರ್ಡ್‌ ವಾಪಸ್ಸು ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ಅಶೋಕ್‌ ಎಚ್ಚರಿಕೆ

ಬೆಂಗಳೂರು: ಸರ್ಕಾರ ಈಗ ರದ್ದು ಮಾಡಿರುವ ಬಿಪಿಎಲ್ ಕಾರ್ಡ್ ಗಳನ್ನು ವಾಪಸ್ಸು ಮಾಡದಿದ್ದರೆ ರಾಜ್ಯಾದ್ಯಂತ ಎಲ್ಲಾ ತಾಲೂಕು ಕಚೇರಿಗಳಿಗೆ ಬೀಗ ಹಾಕಿ ಉಗ್ರ ಹೋರಾಟ ಮಾಡುವುದಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಸಿದ್ದಾರೆ.

ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ನಂಜಪ್ಪ ಬಡಾವಣೆ ಹಾಗೂ ಜೈ ಮಾರುತಿನಗರ ಬಡಾವಣೆಗಳಲ್ಲಿ ಪಡಿತರ ಚೀಟಿ ರದ್ದಾದ ಮನೆಗಳಿಗೆ ಶಾಸಕರಾದ ಡಾ. ಅಶ್ವಥ್ ನಾರಾಯಣ್, ಕೆ. ಗೋಪಾಲಯ್ಯ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನೆಡೆಸಿ ನಂತರ ಮಾಧ್ಯಮಗಳೊಂದಿಗೆ ಅಶೋಕ್ ಮಾತನಾಡಿದರು.

50 ವರ್ಷ ಆಡಳಿತ ಮಾಡಿದಿರಿ ಬೋಗಸ್ ಕಾರ್ಡ್ ಗಳನ್ನು ಯಾರು ಕೊಟ್ಟರು ಎಂಬುದು ನಿಮಗೆ ಗೊತ್ತಿಲ್ಲವೇ ಮೊದಲು ಬೋಗಸ್ ಕಾರ್ಡ್ ಕೊಟ್ಟ ಅಧಿಕಾರಿಗಳ ವಿರುದ್ಧ ತಾಕತ್ತಿದ್ದರೆ ಕ್ರಮ ತೆಗೆದುಕೊಳ್ಳಿ ಎಂದು ಕಿಡಿಕಾರಿದರು

ವಕ್ ಬೋರ್ಡ್ ಗೆ ಆದೇಶ ಕೊಟ್ಟ ರೀತಿಯಲ್ಲೇ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿರುವ ಬಗ್ಗೆಯೂ ಆದೇಶ ಹೊರಡಿಸಿ ಎಪಿಎಲ್ ಕಾರ್ಡ್ ಗಳನ್ನು ತಕ್ಷಣ ವಾಪಸ್ ಪಡೆದು ಬಡವರಿಗೆ ಮತ್ತೆ ಬಿಪಿಎಲ್ ಕಾರ್ಡ್‌ಗಳನ್ನು ವಾಪಸು ಕೊಡಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ವಾಪಸ್ ಪಡೆಯಿರಿ, ಯಾಕೆ ನಿಮಗೆ ದಮ್ ಇಲ್ಲವೆ, ನಿಮ್ಮ ಬಳಿ ಇರುವ ದಾಖಲೆ ಹುಡುಕಿ ಬಿಪಿಎಲ್ ಕಿತ್ತುಹಾಕಿ. ಅವರು ಹೋರಾಟ ಮಾಡುತ್ತಾರೆ ಎಂದು ಬಡವರ ಮೇಲೆ ದರ್ಪ ತೋರಿಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಪಿಎಲ್ ಕಾರ್ಡ್ ರದ್ದು ವಾಪಸು ಪಡೆಯದಿದ್ದರೆ ರಾಜ್ಯದ್ಯಂತ ಎಲ್ಲಾ ತಾಲೂಕು ಕಚೇರಿಗಳಿಗೆ ಬೇಗ ಹಾಕುತ್ತೇವೆ ಅಧಿಕಾರಿಗಳನ್ನು ಕಚೇರಿ ಒಳಗೆ ಕೂಡಿಹಾಕಿ ಬೀಗ ಹಾಕಿ ಪ್ರತಿಭಟಿಸುತ್ತೇವೆ ಈಗಲೇ ನಮ್ಮ ಶಾಸಕರ ಜತೆ ಮಾತನಾಡುತ್ತೇನೆ ಎಂದು ಅಶೋಕ್ ಎಚ್ಚರಿಸಿದರು.

ಶಾಸಕ ಡಾ. ಅಶ್ವತ್ ನಾರಾಯಣ ಮಾತನಾಡಿ, ರಾಜ್ಯ ಸರ್ಕಾರ ತೆಗೆದುಕೊಂಡಿರುವುದು ಜನವಿರೋಧಿ ನಿರ್ಧಾರ ಎಂದು ದೂರಿದರು.

ಸರ್ಕಾರದ ಈ ನಡೆಯನ್ನು ನಾವು ಖಂಡಿಸುತ್ತೇವೆ. ಒಂದು ಕೋಟಿ ಕಾರ್ಡ್ ಗಳಿಗೆ ಕೇಂದ್ರ ಸರ್ಕಾರವೇ ಅನುಕೂಲ ಮಾಡಿಕೊಟ್ಟಿದೆ, ಕೇವಲ 25 ಲಕ್ಷ ಜನರಿಗೆ ಮಾತ್ರ ರಾಜ್ಯ ಸರ್ಕಾರ ಅನುಕೂಲ ಮಾಡಿಕೊಡಬೇಕು ಈಗ ಅದನ್ನು ಕೈ ಬಿಟ್ಟು ಕೈ ತೊಳೆದುಕೊಳ್ಳಬೇಕೆಂದು ಈ ಕೆಟ್ಟ ಸರ್ಕಾರ ಹೊರಟಿದೆ ಎಂದು ದೂರಿದರು.

ಐಟಿ ನೆಪದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡುವುದು ಸರಿಯಲ್ಲ ಗ್ರಾಮಾಂತರ ಭಾಗದಲ್ಲಿ ಬಡವರೆ ಹೆಚ್ಚಾಗಿದ್ದಾರೆ, ಸಿದ್ದರಾಮಯ್ಯ ಅವರಿಗೆ ಬಡತನ ಗೊತ್ತಿಲ್ಲ, ತಂಪಾಗಿ ಖುಷಿಯಾಗಿ ಇದ್ದಾರೆ ಕೂಡಲೇ ಹಿಂದೆ ಪಡೆದಿರುವ ಬಿಪಿಎಲ್ ಕಾರ್ಡ್‌ಗಳನ್ನು ವಾಪಸ್ ಕೊಡಬೇಕು ಎಂದು ಆಗ್ರಹಿಸಿದರು.

ಕ್ಷೇತ್ರದ ಶಾಸಕರು ಆದ ಕೆ ಗೋಪಾಲಯ್ಯ ಮಾತನಾಡಿ, ನಾನೇ ಖುದ್ದಾಗಿ ನೂರಾರು ಕಾಡುಗಳನ್ನು ಚೆಕ್ ಮಾಡಿದ್ದೇನೆ ಅರ್ಹರ ಕಾರ್ಡುಗಳನ್ನು ರದ್ದು ಮಾಡಿರುವುದು ಸರಿಯಲ್ಲ ಎಂದು ಹೇಳಿದರು.

ನಾನು ಆಹಾರ ಸಚಿವನಾಗಿದ್ದಾಗ ಬಹಳಷ್ಟು ಜನರಿಗೆ ಒಳಿತು ಮಾಡಿದ್ದೆ ಪ್ರಧಾನಿ ನರೇಂದ್ರ ಮೋದಿಯವರು ನಾವು ಕೇಳಿದ ಅನುಕೂಲ ಕೊಟ್ಟರು. ಬರೀ ಆಧಾರ್ ಕಾರ್ಡ್ ಇರುವವರೆಗೂ ನಾವು ರೇಷನ್ ಕೊಟ್ಟೆವು. ಆದರೆ ಈ ಸರ್ಕಾರ ಬಿಪಿಎಲ್ ಕಾರ್ಡು ಗಳನ್ನು ರದ್ದು ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ನರೇಂದ್ರಬಾಬು ಬಿಜೆಪಿ ಮುಖಂಡರುಗಳಾದ ಜಯರಾಮಯ್ಯ,ಡಾಬಾ ಶ್ರೀನಿವಾಸ್. ವೆಂಕಟೇಶ್ ಮೂರ್ತಿ, ವೆಂಕಟೇಶ್ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

13 mins ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

35 mins ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

43 mins ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

1 hour ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

1 hour ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

2 hours ago