Categories: ರಾಜ್ಯ

ಬಿಪಿಎಲ್‌ ಕಾರ್ಡ್‌ ವಾಪಸ್ಸು ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ಅಶೋಕ್‌ ಎಚ್ಚರಿಕೆ

ಬೆಂಗಳೂರು: ಸರ್ಕಾರ ಈಗ ರದ್ದು ಮಾಡಿರುವ ಬಿಪಿಎಲ್ ಕಾರ್ಡ್ ಗಳನ್ನು ವಾಪಸ್ಸು ಮಾಡದಿದ್ದರೆ ರಾಜ್ಯಾದ್ಯಂತ ಎಲ್ಲಾ ತಾಲೂಕು ಕಚೇರಿಗಳಿಗೆ ಬೀಗ ಹಾಕಿ ಉಗ್ರ ಹೋರಾಟ ಮಾಡುವುದಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಸಿದ್ದಾರೆ.

ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ನಂಜಪ್ಪ ಬಡಾವಣೆ ಹಾಗೂ ಜೈ ಮಾರುತಿನಗರ ಬಡಾವಣೆಗಳಲ್ಲಿ ಪಡಿತರ ಚೀಟಿ ರದ್ದಾದ ಮನೆಗಳಿಗೆ ಶಾಸಕರಾದ ಡಾ. ಅಶ್ವಥ್ ನಾರಾಯಣ್, ಕೆ. ಗೋಪಾಲಯ್ಯ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನೆಡೆಸಿ ನಂತರ ಮಾಧ್ಯಮಗಳೊಂದಿಗೆ ಅಶೋಕ್ ಮಾತನಾಡಿದರು.

50 ವರ್ಷ ಆಡಳಿತ ಮಾಡಿದಿರಿ ಬೋಗಸ್ ಕಾರ್ಡ್ ಗಳನ್ನು ಯಾರು ಕೊಟ್ಟರು ಎಂಬುದು ನಿಮಗೆ ಗೊತ್ತಿಲ್ಲವೇ ಮೊದಲು ಬೋಗಸ್ ಕಾರ್ಡ್ ಕೊಟ್ಟ ಅಧಿಕಾರಿಗಳ ವಿರುದ್ಧ ತಾಕತ್ತಿದ್ದರೆ ಕ್ರಮ ತೆಗೆದುಕೊಳ್ಳಿ ಎಂದು ಕಿಡಿಕಾರಿದರು

ವಕ್ ಬೋರ್ಡ್ ಗೆ ಆದೇಶ ಕೊಟ್ಟ ರೀತಿಯಲ್ಲೇ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿರುವ ಬಗ್ಗೆಯೂ ಆದೇಶ ಹೊರಡಿಸಿ ಎಪಿಎಲ್ ಕಾರ್ಡ್ ಗಳನ್ನು ತಕ್ಷಣ ವಾಪಸ್ ಪಡೆದು ಬಡವರಿಗೆ ಮತ್ತೆ ಬಿಪಿಎಲ್ ಕಾರ್ಡ್‌ಗಳನ್ನು ವಾಪಸು ಕೊಡಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ವಾಪಸ್ ಪಡೆಯಿರಿ, ಯಾಕೆ ನಿಮಗೆ ದಮ್ ಇಲ್ಲವೆ, ನಿಮ್ಮ ಬಳಿ ಇರುವ ದಾಖಲೆ ಹುಡುಕಿ ಬಿಪಿಎಲ್ ಕಿತ್ತುಹಾಕಿ. ಅವರು ಹೋರಾಟ ಮಾಡುತ್ತಾರೆ ಎಂದು ಬಡವರ ಮೇಲೆ ದರ್ಪ ತೋರಿಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಪಿಎಲ್ ಕಾರ್ಡ್ ರದ್ದು ವಾಪಸು ಪಡೆಯದಿದ್ದರೆ ರಾಜ್ಯದ್ಯಂತ ಎಲ್ಲಾ ತಾಲೂಕು ಕಚೇರಿಗಳಿಗೆ ಬೇಗ ಹಾಕುತ್ತೇವೆ ಅಧಿಕಾರಿಗಳನ್ನು ಕಚೇರಿ ಒಳಗೆ ಕೂಡಿಹಾಕಿ ಬೀಗ ಹಾಕಿ ಪ್ರತಿಭಟಿಸುತ್ತೇವೆ ಈಗಲೇ ನಮ್ಮ ಶಾಸಕರ ಜತೆ ಮಾತನಾಡುತ್ತೇನೆ ಎಂದು ಅಶೋಕ್ ಎಚ್ಚರಿಸಿದರು.

ಶಾಸಕ ಡಾ. ಅಶ್ವತ್ ನಾರಾಯಣ ಮಾತನಾಡಿ, ರಾಜ್ಯ ಸರ್ಕಾರ ತೆಗೆದುಕೊಂಡಿರುವುದು ಜನವಿರೋಧಿ ನಿರ್ಧಾರ ಎಂದು ದೂರಿದರು.

ಸರ್ಕಾರದ ಈ ನಡೆಯನ್ನು ನಾವು ಖಂಡಿಸುತ್ತೇವೆ. ಒಂದು ಕೋಟಿ ಕಾರ್ಡ್ ಗಳಿಗೆ ಕೇಂದ್ರ ಸರ್ಕಾರವೇ ಅನುಕೂಲ ಮಾಡಿಕೊಟ್ಟಿದೆ, ಕೇವಲ 25 ಲಕ್ಷ ಜನರಿಗೆ ಮಾತ್ರ ರಾಜ್ಯ ಸರ್ಕಾರ ಅನುಕೂಲ ಮಾಡಿಕೊಡಬೇಕು ಈಗ ಅದನ್ನು ಕೈ ಬಿಟ್ಟು ಕೈ ತೊಳೆದುಕೊಳ್ಳಬೇಕೆಂದು ಈ ಕೆಟ್ಟ ಸರ್ಕಾರ ಹೊರಟಿದೆ ಎಂದು ದೂರಿದರು.

ಐಟಿ ನೆಪದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡುವುದು ಸರಿಯಲ್ಲ ಗ್ರಾಮಾಂತರ ಭಾಗದಲ್ಲಿ ಬಡವರೆ ಹೆಚ್ಚಾಗಿದ್ದಾರೆ, ಸಿದ್ದರಾಮಯ್ಯ ಅವರಿಗೆ ಬಡತನ ಗೊತ್ತಿಲ್ಲ, ತಂಪಾಗಿ ಖುಷಿಯಾಗಿ ಇದ್ದಾರೆ ಕೂಡಲೇ ಹಿಂದೆ ಪಡೆದಿರುವ ಬಿಪಿಎಲ್ ಕಾರ್ಡ್‌ಗಳನ್ನು ವಾಪಸ್ ಕೊಡಬೇಕು ಎಂದು ಆಗ್ರಹಿಸಿದರು.

ಕ್ಷೇತ್ರದ ಶಾಸಕರು ಆದ ಕೆ ಗೋಪಾಲಯ್ಯ ಮಾತನಾಡಿ, ನಾನೇ ಖುದ್ದಾಗಿ ನೂರಾರು ಕಾಡುಗಳನ್ನು ಚೆಕ್ ಮಾಡಿದ್ದೇನೆ ಅರ್ಹರ ಕಾರ್ಡುಗಳನ್ನು ರದ್ದು ಮಾಡಿರುವುದು ಸರಿಯಲ್ಲ ಎಂದು ಹೇಳಿದರು.

ನಾನು ಆಹಾರ ಸಚಿವನಾಗಿದ್ದಾಗ ಬಹಳಷ್ಟು ಜನರಿಗೆ ಒಳಿತು ಮಾಡಿದ್ದೆ ಪ್ರಧಾನಿ ನರೇಂದ್ರ ಮೋದಿಯವರು ನಾವು ಕೇಳಿದ ಅನುಕೂಲ ಕೊಟ್ಟರು. ಬರೀ ಆಧಾರ್ ಕಾರ್ಡ್ ಇರುವವರೆಗೂ ನಾವು ರೇಷನ್ ಕೊಟ್ಟೆವು. ಆದರೆ ಈ ಸರ್ಕಾರ ಬಿಪಿಎಲ್ ಕಾರ್ಡು ಗಳನ್ನು ರದ್ದು ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ನರೇಂದ್ರಬಾಬು ಬಿಜೆಪಿ ಮುಖಂಡರುಗಳಾದ ಜಯರಾಮಯ್ಯ,ಡಾಬಾ ಶ್ರೀನಿವಾಸ್. ವೆಂಕಟೇಶ್ ಮೂರ್ತಿ, ವೆಂಕಟೇಶ್ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

2 mins ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

4 mins ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

6 mins ago

ಸಿದ್ದಾಪುರದಲ್ಲೊಂದು ವಿಂಟೇಜ್ ಕಸದ ತೊಟ್ಟಿ!

ಕೃಷ್ಣ ಸಿದ್ದಾಪುರ ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನ; ನಿಂತಿರುವ ಲಾರಿಯೊಳಗೆ ರಾಶಿ ರಾಶಿ ಕಸ ಸಿದ್ದಾಪುರ: ಸ್ವಚ್ಛತೆ ಬಗ್ಗೆ ಎಷ್ಟೇ…

13 mins ago

ಸುರಂಗ ಕಾಲುವೆ ಮೇಲೆ ಸಿಡಿಮದ್ದು ಬಳಸಿ ಕಾಮಗಾರಿ; ರೈತರ ಆತಂಕ

ಹೇಮಾವತಿ ಕಾಲುವೆಗೆ ಅಪಾಯ ಸಾಧ್ಯತೆ: ಕಾಮಗಾರಿ ಸ್ಥಗಿತಕೆ ರೈತರ ಒತ್ತಾಯ ಕೆ.ಆರ್.ಪೇಟೆ: ತಾಲ್ಲೂಕಿನ ಶೀಳನೆರೆ ಹೋಬಳಿಯ ಚಟ್ಟಂಗೆರೆ ಗ್ರಾಮದ ಬಳಿ ಸುಮಾರು…

18 mins ago

ಹಿಮಾಲಯಕ್ಕಿಂತಲೂ ನಂಜನಗೂಡಲ್ಲೇ ಬಿಸಿ ನೀರು ತುಟ್ಟಿ!

ಎಸ್.ಎಸ್.ಭಟ್ ಕಪಿಲಾ ತೀರದ ಸ್ನಾನಘಟ್ಟದಲ್ಲಿ ಬಕೆಟ್ ನೀರಿಗೆ ೫೦-೧೦೦ ರೂ. ಸುಲಿಗೆ ಎಂದು ಭಕ್ತಾದಿಗಳ ಆರೋಪ ನಂಜನಗೂಡು: ಹಿಮಾಲಯದಲ್ಲಿ ಪ್ರತಿ…

23 mins ago