Categories: ರಾಜ್ಯ

ಬಿಪಿಎಲ್‌ ಕಾರ್ಡ್‌ ವಾಪಸ್ಸು ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ: ಅಶೋಕ್‌ ಎಚ್ಚರಿಕೆ

ಬೆಂಗಳೂರು: ಸರ್ಕಾರ ಈಗ ರದ್ದು ಮಾಡಿರುವ ಬಿಪಿಎಲ್ ಕಾರ್ಡ್ ಗಳನ್ನು ವಾಪಸ್ಸು ಮಾಡದಿದ್ದರೆ ರಾಜ್ಯಾದ್ಯಂತ ಎಲ್ಲಾ ತಾಲೂಕು ಕಚೇರಿಗಳಿಗೆ ಬೀಗ ಹಾಕಿ ಉಗ್ರ ಹೋರಾಟ ಮಾಡುವುದಾಗಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ಎಚ್ಚರಿಸಿದ್ದಾರೆ.

ಮಹಾಲಕ್ಷ್ಮಿ ವಿಧಾನಸಭಾ ಕ್ಷೇತ್ರದ ನಂಜಪ್ಪ ಬಡಾವಣೆ ಹಾಗೂ ಜೈ ಮಾರುತಿನಗರ ಬಡಾವಣೆಗಳಲ್ಲಿ ಪಡಿತರ ಚೀಟಿ ರದ್ದಾದ ಮನೆಗಳಿಗೆ ಶಾಸಕರಾದ ಡಾ. ಅಶ್ವಥ್ ನಾರಾಯಣ್, ಕೆ. ಗೋಪಾಲಯ್ಯ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನೆಡೆಸಿ ನಂತರ ಮಾಧ್ಯಮಗಳೊಂದಿಗೆ ಅಶೋಕ್ ಮಾತನಾಡಿದರು.

50 ವರ್ಷ ಆಡಳಿತ ಮಾಡಿದಿರಿ ಬೋಗಸ್ ಕಾರ್ಡ್ ಗಳನ್ನು ಯಾರು ಕೊಟ್ಟರು ಎಂಬುದು ನಿಮಗೆ ಗೊತ್ತಿಲ್ಲವೇ ಮೊದಲು ಬೋಗಸ್ ಕಾರ್ಡ್ ಕೊಟ್ಟ ಅಧಿಕಾರಿಗಳ ವಿರುದ್ಧ ತಾಕತ್ತಿದ್ದರೆ ಕ್ರಮ ತೆಗೆದುಕೊಳ್ಳಿ ಎಂದು ಕಿಡಿಕಾರಿದರು

ವಕ್ ಬೋರ್ಡ್ ಗೆ ಆದೇಶ ಕೊಟ್ಟ ರೀತಿಯಲ್ಲೇ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿರುವ ಬಗ್ಗೆಯೂ ಆದೇಶ ಹೊರಡಿಸಿ ಎಪಿಎಲ್ ಕಾರ್ಡ್ ಗಳನ್ನು ತಕ್ಷಣ ವಾಪಸ್ ಪಡೆದು ಬಡವರಿಗೆ ಮತ್ತೆ ಬಿಪಿಎಲ್ ಕಾರ್ಡ್‌ಗಳನ್ನು ವಾಪಸು ಕೊಡಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ವಾಪಸ್ ಪಡೆಯಿರಿ, ಯಾಕೆ ನಿಮಗೆ ದಮ್ ಇಲ್ಲವೆ, ನಿಮ್ಮ ಬಳಿ ಇರುವ ದಾಖಲೆ ಹುಡುಕಿ ಬಿಪಿಎಲ್ ಕಿತ್ತುಹಾಕಿ. ಅವರು ಹೋರಾಟ ಮಾಡುತ್ತಾರೆ ಎಂದು ಬಡವರ ಮೇಲೆ ದರ್ಪ ತೋರಿಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಪಿಎಲ್ ಕಾರ್ಡ್ ರದ್ದು ವಾಪಸು ಪಡೆಯದಿದ್ದರೆ ರಾಜ್ಯದ್ಯಂತ ಎಲ್ಲಾ ತಾಲೂಕು ಕಚೇರಿಗಳಿಗೆ ಬೇಗ ಹಾಕುತ್ತೇವೆ ಅಧಿಕಾರಿಗಳನ್ನು ಕಚೇರಿ ಒಳಗೆ ಕೂಡಿಹಾಕಿ ಬೀಗ ಹಾಕಿ ಪ್ರತಿಭಟಿಸುತ್ತೇವೆ ಈಗಲೇ ನಮ್ಮ ಶಾಸಕರ ಜತೆ ಮಾತನಾಡುತ್ತೇನೆ ಎಂದು ಅಶೋಕ್ ಎಚ್ಚರಿಸಿದರು.

ಶಾಸಕ ಡಾ. ಅಶ್ವತ್ ನಾರಾಯಣ ಮಾತನಾಡಿ, ರಾಜ್ಯ ಸರ್ಕಾರ ತೆಗೆದುಕೊಂಡಿರುವುದು ಜನವಿರೋಧಿ ನಿರ್ಧಾರ ಎಂದು ದೂರಿದರು.

ಸರ್ಕಾರದ ಈ ನಡೆಯನ್ನು ನಾವು ಖಂಡಿಸುತ್ತೇವೆ. ಒಂದು ಕೋಟಿ ಕಾರ್ಡ್ ಗಳಿಗೆ ಕೇಂದ್ರ ಸರ್ಕಾರವೇ ಅನುಕೂಲ ಮಾಡಿಕೊಟ್ಟಿದೆ, ಕೇವಲ 25 ಲಕ್ಷ ಜನರಿಗೆ ಮಾತ್ರ ರಾಜ್ಯ ಸರ್ಕಾರ ಅನುಕೂಲ ಮಾಡಿಕೊಡಬೇಕು ಈಗ ಅದನ್ನು ಕೈ ಬಿಟ್ಟು ಕೈ ತೊಳೆದುಕೊಳ್ಳಬೇಕೆಂದು ಈ ಕೆಟ್ಟ ಸರ್ಕಾರ ಹೊರಟಿದೆ ಎಂದು ದೂರಿದರು.

ಐಟಿ ನೆಪದಲ್ಲಿ ಬಿಪಿಎಲ್ ಕಾರ್ಡ್ ರದ್ದು ಮಾಡುವುದು ಸರಿಯಲ್ಲ ಗ್ರಾಮಾಂತರ ಭಾಗದಲ್ಲಿ ಬಡವರೆ ಹೆಚ್ಚಾಗಿದ್ದಾರೆ, ಸಿದ್ದರಾಮಯ್ಯ ಅವರಿಗೆ ಬಡತನ ಗೊತ್ತಿಲ್ಲ, ತಂಪಾಗಿ ಖುಷಿಯಾಗಿ ಇದ್ದಾರೆ ಕೂಡಲೇ ಹಿಂದೆ ಪಡೆದಿರುವ ಬಿಪಿಎಲ್ ಕಾರ್ಡ್‌ಗಳನ್ನು ವಾಪಸ್ ಕೊಡಬೇಕು ಎಂದು ಆಗ್ರಹಿಸಿದರು.

ಕ್ಷೇತ್ರದ ಶಾಸಕರು ಆದ ಕೆ ಗೋಪಾಲಯ್ಯ ಮಾತನಾಡಿ, ನಾನೇ ಖುದ್ದಾಗಿ ನೂರಾರು ಕಾಡುಗಳನ್ನು ಚೆಕ್ ಮಾಡಿದ್ದೇನೆ ಅರ್ಹರ ಕಾರ್ಡುಗಳನ್ನು ರದ್ದು ಮಾಡಿರುವುದು ಸರಿಯಲ್ಲ ಎಂದು ಹೇಳಿದರು.

ನಾನು ಆಹಾರ ಸಚಿವನಾಗಿದ್ದಾಗ ಬಹಳಷ್ಟು ಜನರಿಗೆ ಒಳಿತು ಮಾಡಿದ್ದೆ ಪ್ರಧಾನಿ ನರೇಂದ್ರ ಮೋದಿಯವರು ನಾವು ಕೇಳಿದ ಅನುಕೂಲ ಕೊಟ್ಟರು. ಬರೀ ಆಧಾರ್ ಕಾರ್ಡ್ ಇರುವವರೆಗೂ ನಾವು ರೇಷನ್ ಕೊಟ್ಟೆವು. ಆದರೆ ಈ ಸರ್ಕಾರ ಬಿಪಿಎಲ್ ಕಾರ್ಡು ಗಳನ್ನು ರದ್ದು ಮಾಡಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ನರೇಂದ್ರಬಾಬು ಬಿಜೆಪಿ ಮುಖಂಡರುಗಳಾದ ಜಯರಾಮಯ್ಯ,ಡಾಬಾ ಶ್ರೀನಿವಾಸ್. ವೆಂಕಟೇಶ್ ಮೂರ್ತಿ, ವೆಂಕಟೇಶ್ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

3 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

3 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

3 hours ago

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

13 hours ago