ರಾಜ್ಯ

RSS ಸೇರಿದಂತೆ ಖಾಸಗಿ ಸಂಘ ಸಂಸ್ಥೆ ಚಟುವಟಿಕೆಗೆ ಬ್ರೇಕ್‌ : ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಚಟುವಟಿಕೆಗಳು ಸೇರಿದಂತೆ ಖಾಸಗಿ ಕಾರ್ಯಕ್ರಮಗಳನ್ನು ನಿಷೇಧಿಸಿಸಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಗುರುವಾರ ಮಹತ್ವ ನಿರ್ಧಾರ ಕೈಗೊಂಡಿದೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದು ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಗೆ ಕಡಿವಾಣ ಹಾಕುವ ಬಗ್ಗೆ ಇಂದಿನ ಸಭೆಯಲ್ಲಿ ತಿರ್ಮಾನಿಸಲಾಗುವುದು. ತಮಿಳುನಾಡು ಮಾದರಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸಭೆ ಮುನ್ನ ತಿಳಿಸಿದ್ದರು.

ಇದನ್ನು ಓದಿ: ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಿ: ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ನಂತರ ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಸಚಿವರು, ಸಿಎಂ, ಡಿಸಿಎಂ ಚರ್ಚಿಸಿದರು. ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಧರ್ಮದ ಖಾಸಗಿ ಕಾರ್ಯಕ್ರಮಗಳಿಗೆ ಸರ್ಕಾರಿ ಜಾಗಗಳಲ್ಲಿ ನಿಷೇಧಿಸಲಾಗಿದೆ. ಇದು ಕೇವಲ ಆರ್‌ಎಸ್‌ಎಸ್‌ ಮಾತ್ರವಲ್ಲ ಇತರ ಖಾಸಗಿ ಸಂಘಟನೆ, ಸಂಸ್ಥೆಗಳಿಗೂ ಅನ್ವಯವಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ಆರ್‌ಎಸ್‌ಎಸ್‌ ಚಟುವಟಿಕೆಗೆ ಸರ್ಕಾರ ಮೂಗುದಾರ ಹಾಕಿದೆ. ಆರ್‌ಎಸ್‌ಎಸ್‌ ಬೈಠಕ್, ಕವಾಯಿತಿ ನಿರ್ಬಂಧಿಸಿದಂತಾಗಿದೆ.

ತಮಿಳುನಾಡು ಮಾದರಿ ಅನುಸರಿಸಿದ ರಾಜ್ಯ ಸರ್ಕಾರ ಈ ತಿರ್ಮಾನಕ್ಕೆ ಬಂದಿದೆ. ಅಲ್ಲಿ ಸರ್ಕಾರಿ ಜಾಗಗಳಲ್ಲಿ ಯಾವುದೊ ಒಂದು ಖಾಸಗಿ ಸಂಸ್ಥೆ, ಸಂಘಟನೆ ಯಾವುದಾದರೂ ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಅದೇ ರೀತಿ ಇಲ್ಲಿಯೂ ಮಾಡಲಾಗಿದೆ. ಶೀಘ್ರವೇ ಈ ಕುರಿತು ಹೊಸ ನಿಯಮ ಜಾರಿಗೆ ತರಲು ಸರ್ಕಾರ ನಿರ್ಧಾರ. ಸಂಪುಟದಲ್ಲಿ ಖಾಸಗಿ ಸಂಘಟನೆ, ಸಂಸ್ಥೆ ಎಂದಿರುವ ನಾಯಕರು ಎಲ್ಲಿಯೂ ಆರ್‌ಎಸ್‌ಎಸ್‌ ಎಂದು ಉಲ್ಲೇಖಿಸದೇ ನಿರ್ಬಂಧ ನಿಯಮ ಜಾರಿಗೆ ತಂದಿದೆ.

ಆಂದೋಲನ ಡೆಸ್ಕ್

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

1 hour ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

1 hour ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

2 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

2 hours ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

2 hours ago