ರಾಜ್ಯ

RSS ಸೇರಿದಂತೆ ಖಾಸಗಿ ಸಂಘ ಸಂಸ್ಥೆ ಚಟುವಟಿಕೆಗೆ ಬ್ರೇಕ್‌ : ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಶಾಲಾ, ಕಾಲೇಜುಗಳ ಆವರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಚಟುವಟಿಕೆಗಳು ಸೇರಿದಂತೆ ಖಾಸಗಿ ಕಾರ್ಯಕ್ರಮಗಳನ್ನು ನಿಷೇಧಿಸಿಸಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಗುರುವಾರ ಮಹತ್ವ ನಿರ್ಧಾರ ಕೈಗೊಂಡಿದೆ.

ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್ ಚಟುವಟಿಕೆ ನಿಷೇಧಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದು ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್‌ ಗೆ ಕಡಿವಾಣ ಹಾಕುವ ಬಗ್ಗೆ ಇಂದಿನ ಸಭೆಯಲ್ಲಿ ತಿರ್ಮಾನಿಸಲಾಗುವುದು. ತಮಿಳುನಾಡು ಮಾದರಿ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಸಭೆ ಮುನ್ನ ತಿಳಿಸಿದ್ದರು.

ಇದನ್ನು ಓದಿ: ಆರ್‌ಎಸ್‌ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸದಂತೆ ನಿಷೇಧಿಸಿ: ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ನಂತರ ನಡೆದ ಸಚಿವ ಸಂಪುಟದಲ್ಲಿ ಈ ಬಗ್ಗೆ ಸಚಿವರು, ಸಿಎಂ, ಡಿಸಿಎಂ ಚರ್ಚಿಸಿದರು. ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಧರ್ಮದ ಖಾಸಗಿ ಕಾರ್ಯಕ್ರಮಗಳಿಗೆ ಸರ್ಕಾರಿ ಜಾಗಗಳಲ್ಲಿ ನಿಷೇಧಿಸಲಾಗಿದೆ. ಇದು ಕೇವಲ ಆರ್‌ಎಸ್‌ಎಸ್‌ ಮಾತ್ರವಲ್ಲ ಇತರ ಖಾಸಗಿ ಸಂಘಟನೆ, ಸಂಸ್ಥೆಗಳಿಗೂ ಅನ್ವಯವಾಗುತ್ತದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ಆರ್‌ಎಸ್‌ಎಸ್‌ ಚಟುವಟಿಕೆಗೆ ಸರ್ಕಾರ ಮೂಗುದಾರ ಹಾಕಿದೆ. ಆರ್‌ಎಸ್‌ಎಸ್‌ ಬೈಠಕ್, ಕವಾಯಿತಿ ನಿರ್ಬಂಧಿಸಿದಂತಾಗಿದೆ.

ತಮಿಳುನಾಡು ಮಾದರಿ ಅನುಸರಿಸಿದ ರಾಜ್ಯ ಸರ್ಕಾರ ಈ ತಿರ್ಮಾನಕ್ಕೆ ಬಂದಿದೆ. ಅಲ್ಲಿ ಸರ್ಕಾರಿ ಜಾಗಗಳಲ್ಲಿ ಯಾವುದೊ ಒಂದು ಖಾಸಗಿ ಸಂಸ್ಥೆ, ಸಂಘಟನೆ ಯಾವುದಾದರೂ ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ. ಅದೇ ರೀತಿ ಇಲ್ಲಿಯೂ ಮಾಡಲಾಗಿದೆ. ಶೀಘ್ರವೇ ಈ ಕುರಿತು ಹೊಸ ನಿಯಮ ಜಾರಿಗೆ ತರಲು ಸರ್ಕಾರ ನಿರ್ಧಾರ. ಸಂಪುಟದಲ್ಲಿ ಖಾಸಗಿ ಸಂಘಟನೆ, ಸಂಸ್ಥೆ ಎಂದಿರುವ ನಾಯಕರು ಎಲ್ಲಿಯೂ ಆರ್‌ಎಸ್‌ಎಸ್‌ ಎಂದು ಉಲ್ಲೇಖಿಸದೇ ನಿರ್ಬಂಧ ನಿಯಮ ಜಾರಿಗೆ ತಂದಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

39 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago