ಕಾಂತರಾಜು ಕಮಿಟಿ ವರದಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜನವರಿ 28ರಂದು ಬೃಹತ್ ಅಹಿಂದಾ ಸಮಾವೇಶ ನಡೆಸಲು ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮುಹೂರ್ತ ನಿಗದಿಪಡಿಸಲಾಗಿದೆ.
ಚಿತ್ರದುರ್ಗದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಈ ಸಮಾವೇಶ ನಡೆಸಲು ತೀರ್ಮಾನಿಸಲಾಗಿದ್ದು, ಜನವರಿ 28ರಂದು ಬೆಳಗ್ಗೆ 11 ಗಂಟೆಗೆ ಈ ಸಮಾವೇಶ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರನ್ನೂ ಸಹ ಈ ಸಮಾವೇಶಕ್ಕೆ ಆಹ್ವಾನಿಸಲಾಗಿದ್ದು ಅಲ್ಪಸಂಖ್ಯಾತ, ದಲಿತ, ಎಸ್ಸಿ ಹಾಗೂ ಎಸ್ಟಿ ರಾಜಕೀಯ ನಾಯಕರಿಗೂ ಸಹ ಆಹ್ವಾನ ನೀಡಲಾಗಿದೆ. ಈ ಮೂಲಕ ಅಹಿಂದಾ ವರ್ಗ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
ಅಹಿಂದ ಹಕ್ಕೊತ್ತಾಯಗಳೇನು?
* ಹೆಚ್. ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿ ಯಥವತ್ತಾಗಿ ಅಂಗೀಕರಿಸಿ ಜಾರಿಗೊಳಿಸಬೇಕು.
* ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು.
* EWS 10% ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಯಿಸುವುದು.
* ಮಹಿಳಾ ರಾಜಕೀಯ ಮೀಸಲಾತಿ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಒಳ ಮೀಸಲಾತಿ ಕಲ್ಪಿಸಬೇಕು.
* ರಾಜಕೀಯ ಮೀಸಲಾತಿಯನ್ನು ಲೋಕಸಭೆ, ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು
* ಜನಸಂಖ್ಯೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕು. ಖಾಸಗಿ ಕ್ಷೇತ್ರಕ್ಕೂ ಮೀಸಲಾತಿ ವಿಸ್ತರಿಸಬೇಕು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…