ರಾಜ್ಯ

ಕಾಂತರಾಜು ವರದಿ ಒತ್ತಾಯಿಸಿ ಜನವರಿ 28ಕ್ಕೆ ಬೃಹತ್ ಅಹಿಂದಾ ಸಮಾವೇಶ‌; ಸಿಎಂಗೆ ಆಹ್ವಾನ

ಕಾಂತರಾಜು ಕಮಿಟಿ ವರದಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜನವರಿ 28ರಂದು ಬೃಹತ್‌ ಅಹಿಂದಾ ಸಮಾವೇಶ ನಡೆಸಲು ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮುಹೂರ್ತ ನಿಗದಿಪಡಿಸಲಾಗಿದೆ.

ಚಿತ್ರದುರ್ಗದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಈ ಸಮಾವೇಶ ನಡೆಸಲು ತೀರ್ಮಾನಿಸಲಾಗಿದ್ದು, ಜನವರಿ 28ರಂದು ಬೆಳಗ್ಗೆ 11 ಗಂಟೆಗೆ ಈ ಸಮಾವೇಶ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರನ್ನೂ ಸಹ ಈ ಸಮಾವೇಶಕ್ಕೆ ಆಹ್ವಾನಿಸಲಾಗಿದ್ದು ಅಲ್ಪಸಂಖ್ಯಾತ, ದಲಿತ, ಎಸ್‌ಸಿ ಹಾಗೂ ಎಸ್‌ಟಿ ರಾಜಕೀಯ ನಾಯಕರಿಗೂ ಸಹ ಆಹ್ವಾನ ನೀಡಲಾಗಿದೆ. ಈ ಮೂಲಕ ಅಹಿಂದಾ ವರ್ಗ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.

ಅಹಿಂದ ಹಕ್ಕೊತ್ತಾಯಗಳೇನು?

* ಹೆಚ್. ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿ ಯಥವತ್ತಾಗಿ ಅಂಗೀಕರಿಸಿ ಜಾರಿಗೊಳಿಸಬೇಕು.
* ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು.
* EWS 10% ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಯಿಸುವುದು.
* ಮಹಿಳಾ ರಾಜಕೀಯ ಮೀಸಲಾತಿ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಒಳ ಮೀಸಲಾತಿ ಕಲ್ಪಿಸಬೇಕು.
* ರಾಜಕೀಯ ಮೀಸಲಾತಿಯನ್ನು ಲೋಕಸಭೆ, ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು
* ಜನಸಂಖ್ಯೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕು. ಖಾಸಗಿ ಕ್ಷೇತ್ರಕ್ಕೂ ಮೀಸಲಾತಿ ವಿಸ್ತರಿಸಬೇಕು.

andolana

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

23 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

23 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

23 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

23 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

23 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

23 hours ago