ಕಾಂತರಾಜು ಕಮಿಟಿ ವರದಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಜನವರಿ 28ರಂದು ಬೃಹತ್ ಅಹಿಂದಾ ಸಮಾವೇಶ ನಡೆಸಲು ಶೋಷಿತ ಹಾಗೂ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಮುಹೂರ್ತ ನಿಗದಿಪಡಿಸಲಾಗಿದೆ.
ಚಿತ್ರದುರ್ಗದ ಶ್ರೀ ಬಸವ ಮೂರ್ತಿ ಮಾದರ ಚೆನ್ನಯ್ಯ ಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಈ ಸಮಾವೇಶ ನಡೆಸಲು ತೀರ್ಮಾನಿಸಲಾಗಿದ್ದು, ಜನವರಿ 28ರಂದು ಬೆಳಗ್ಗೆ 11 ಗಂಟೆಗೆ ಈ ಸಮಾವೇಶ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರನ್ನೂ ಸಹ ಈ ಸಮಾವೇಶಕ್ಕೆ ಆಹ್ವಾನಿಸಲಾಗಿದ್ದು ಅಲ್ಪಸಂಖ್ಯಾತ, ದಲಿತ, ಎಸ್ಸಿ ಹಾಗೂ ಎಸ್ಟಿ ರಾಜಕೀಯ ನಾಯಕರಿಗೂ ಸಹ ಆಹ್ವಾನ ನೀಡಲಾಗಿದೆ. ಈ ಮೂಲಕ ಅಹಿಂದಾ ವರ್ಗ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ.
ಅಹಿಂದ ಹಕ್ಕೊತ್ತಾಯಗಳೇನು?
* ಹೆಚ್. ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿ ಯಥವತ್ತಾಗಿ ಅಂಗೀಕರಿಸಿ ಜಾರಿಗೊಳಿಸಬೇಕು.
* ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು.
* EWS 10% ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಯಿಸುವುದು.
* ಮಹಿಳಾ ರಾಜಕೀಯ ಮೀಸಲಾತಿ ಕಾಯ್ದೆಯನ್ನು ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಒಳ ಮೀಸಲಾತಿ ಕಲ್ಪಿಸಬೇಕು.
* ರಾಜಕೀಯ ಮೀಸಲಾತಿಯನ್ನು ಲೋಕಸಭೆ, ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು
* ಜನಸಂಖ್ಯೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕು. ಖಾಸಗಿ ಕ್ಷೇತ್ರಕ್ಕೂ ಮೀಸಲಾತಿ ವಿಸ್ತರಿಸಬೇಕು.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…