ಬಳ್ಳಾರಿ: ದಲ್ಲಾಳಿಗಳ ಕಾಟದಿಂದ ಬೇಸತ್ತು ನಾಲ್ವರು ರೈತರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ.
ರುದ್ರೇಶ್, ಶೇಖರಪ್ಪ, ಹನುಮಂತ, ಕೋಣೇರಪ್ಪ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ರೈತರಾಗಿದ್ದಾರೆ. ಅಸ್ವಸ್ಥಗೊಂಡ ನಾಲ್ವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ವರ್ಷ ಅಗ್ರಿಗ್ರೇಡ್ ಕಂಪನಿಯ ವಿರೂಪಾಕ್ಷಪ್ಪ, ಸುದರ್ಶನ, ರಾಯರೆಡ್ಡಿ ಎಂಬ ದಲ್ಲಾಳಿಗಳ ಮೂಲಕ ರೈತರು ಮೆಣಸಿನಕಾಯಿ ಮಾರಾಟ ಮಾಡಿದ್ದರು. ಆಶಾರಾಣಿ, ಅಶೋಕ್ ಕುಮಾರ್, ಶಿವಮೂರ್ತಿ ಎಂಬುವವರಿಂದ ಮೆಣಸಿನಕಾಯಿ ಖರೀದಿ ಆರೋಪ ಮಾಡಲಾಗಿದೆ. 1 ಕೋಟಿ 93 ಲಕ್ಷ ರೂ ಹಣವನ್ನು ದಲ್ಲಾಳಿಗಳು ಬಾಕಿ ಉಳಿಸಿಕೊಂಡಿದ್ದಾರೆ.
ಕಳೆದ 18 ದಿನಗಳಿಂದ ಹಣ ನೀಡದೇ ಸತಾಯಿಸುತ್ತಿದ್ದಾರೆ. ಹೀಗಾಗಿ ದಲ್ಲಾಳಿಗಳ ಕಳ್ಳಾಟಕ್ಕೆ ಮನನೊಂದು ವಿಷ ಸೇವಿಸಿದ್ದರು. ಬಾಕಿ ಹಣ ನೀಡದಿದ್ದರೆ ಸಾಮೂಹಿಕವಾಗಿ ವಿಷ ಸೇವಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…