ಬಳ್ಳಾರಿ: ದಲ್ಲಾಳಿಗಳ ಕಾಟದಿಂದ ಬೇಸತ್ತು ನಾಲ್ವರು ರೈತರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮದಲ್ಲಿ ನಡೆದಿದೆ.
ರುದ್ರೇಶ್, ಶೇಖರಪ್ಪ, ಹನುಮಂತ, ಕೋಣೇರಪ್ಪ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ರೈತರಾಗಿದ್ದಾರೆ. ಅಸ್ವಸ್ಥಗೊಂಡ ನಾಲ್ವರನ್ನು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ವರ್ಷ ಅಗ್ರಿಗ್ರೇಡ್ ಕಂಪನಿಯ ವಿರೂಪಾಕ್ಷಪ್ಪ, ಸುದರ್ಶನ, ರಾಯರೆಡ್ಡಿ ಎಂಬ ದಲ್ಲಾಳಿಗಳ ಮೂಲಕ ರೈತರು ಮೆಣಸಿನಕಾಯಿ ಮಾರಾಟ ಮಾಡಿದ್ದರು. ಆಶಾರಾಣಿ, ಅಶೋಕ್ ಕುಮಾರ್, ಶಿವಮೂರ್ತಿ ಎಂಬುವವರಿಂದ ಮೆಣಸಿನಕಾಯಿ ಖರೀದಿ ಆರೋಪ ಮಾಡಲಾಗಿದೆ. 1 ಕೋಟಿ 93 ಲಕ್ಷ ರೂ ಹಣವನ್ನು ದಲ್ಲಾಳಿಗಳು ಬಾಕಿ ಉಳಿಸಿಕೊಂಡಿದ್ದಾರೆ.
ಕಳೆದ 18 ದಿನಗಳಿಂದ ಹಣ ನೀಡದೇ ಸತಾಯಿಸುತ್ತಿದ್ದಾರೆ. ಹೀಗಾಗಿ ದಲ್ಲಾಳಿಗಳ ಕಳ್ಳಾಟಕ್ಕೆ ಮನನೊಂದು ವಿಷ ಸೇವಿಸಿದ್ದರು. ಬಾಕಿ ಹಣ ನೀಡದಿದ್ದರೆ ಸಾಮೂಹಿಕವಾಗಿ ವಿಷ ಸೇವಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…