ರಾಜ್ಯ

ಸಿದ್ದರಾಮಯ್ಯ ಸರ್ಕಾರದಿಂದ ಎಲ್ಲಾ ಧರ್ಮಕ್ಕೂ ಗೌರವ : ಸಚಿವ ಸುರೇಶ ಅಭಿಮತ

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ.

ಹೆಬ್ಬಾಳ ಕ್ಷೇತ್ರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯಗಳನ್ನು ಕೋರಿ ಅವರು ಮಾತನಾಡಿದರು.

ಸಿದ್ದರಾಮಯ್ಯ ಅವರು ಈ ಬಾರಿ ಮುಖ್ಯಮಂತ್ರಿ ಆದ ನಂತರ ದೇವಾಲಯಗಳು ಮತ್ತು ಮಸೀದಿ ಸೇರಿದಂತೆ ಎಲ್ಲಾ ಧರ್ಮದ ಪ್ರಾರ್ಥನಾ ಮಂದಿರಗಳ ಶ್ರೇಯೋಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದಾರೆ ಎಂದರು.

ಈ ಮೂಲಕ ನಮ್ಮ ಸರ್ಕಾರ ಎಲ್ಲಾ ಧರ್ಮದವರನ್ನು ಸಮಾನವಾಗಿ ಕಾಣುವ ಮತ್ತು ಗೌರವ ಕೊಡುವ ಕೆಲಸ ಮಾಡುತ್ತಿದೆ ಎಂದು ಸುರೇಶ್ ಹೇಳಿದರು.

ಸಮಾಜದಲ್ಲಿ ಎಲ್ಲರೂ ಶಾಂತಿ, ಸಹಬಾಳ್ವೆಯಿಂದ ಇದ್ದಾಗ ಮಾತ್ರ ರಾಜ್ಯ, ದೇಶ ಮತ್ತು ಮಾನವ ಸಂಕುಲ ಉನ್ನತಿ ಸಾಧಿಸಲು ಸಾಧ್ಯವಾಗುತ್ತದೆ. ತ್ಯಾಗದ ಸಂಕೇತವಾದ ಬಕ್ರೀದ್ ಹಬ್ಬದ ಈ ಶುಭ ಸಂದರ್ಭದಲ್ಲಿ ಎಲ್ಲರೂ ಸಮಾಜದ ಒಳಿತಿಗಾಗಿ ಸಂಕಲ್ಪ ಮಾಡೋಣ ಎಂದು ಅವರು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ ಸಚಿವರು, ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

9 mins ago

ಆಂದೋಲನ ಸಂಪಾದಕೀಯ | ಅಡ್ಡ ಮತದಾನ : ರಾಜಕಾರಣದ ನೈತಿಕ ದಿವಾಳಿತನ

ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…

49 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 22 ಸೋಮವಾರ

1 hour ago

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

12 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

13 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

14 hours ago