ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಏಕವಚನಲ್ಲೇ ಛಾಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ನಾನು ಈ ಕ್ಷೇತ್ರದಲ್ಲಿ ಗೆದ್ದ ಬಳಿಕ ಅವರಪ್ಪ ಬಂದು ನನ್ನನ್ನು ಬಿಜೆಪಿ ಕರೆದುಕೊಂಡು ಹೋಗುತ್ತಾನೆ. ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ್ದರು, ಅವರ ಕೈಕಾಲನ್ನೇ ಕಟ್ಟಿ ಪಕ್ಷಕ್ಕೆ ಮತ್ತೆ ಆಹ್ವಾನಿಸಿರುವಾಗ ಮೂಲ ಬಿಜೆಪಿಯವನಾದ ನನ್ನನ್ನು ಕರೆಯುದಿಲ್ಲವೇ. ಬಿಜೆಪಿಯನ್ನು ಕಟ್ಟಿದವನು ನಾನು, ನಾನು ಬಿಜೆಪಿಯಲ್ಲಿಯೇ ಇದ್ದವನು, ಯಡಿಯೂರಪ್ಪ ಕೆಜೆಪಿ ಕಟ್ಟಿ ನಂತರ ಪಕ್ಷಕ್ಕೆ ವಾಪಾಸಾಗಿದ್ದಾನೆ ಎಂದು ಕಿಡಿಕಾರಿದರು.
ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುವ ಮೂಲಕ ರಾಜ್ಯ ಬಿಜೆಪಿಯನ್ನು ಅಪ್ಪ-ಮಕ್ಕಳಿಂದ ಮಕ್ತ ಮಾಡುತ್ತೇನೆ. ರಾಘವೇಂದ್ರ ಸೋಲುವ ಮೂಲಕ ಆತನ ಕಥೆ ಮುಗಿದಂತೆಯೇ, ಚುನಾವಣೆ ಬಳಿಕ ಬಿ.ವೈ ವಿಜೈಯೇಂದ್ರ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾನೆ ಎಂದು ಏಕವಚನದಲ್ಲಿಯೇ ಈಶ್ವರಪ್ಪ ಮಾತನಾಡಿದರು.
ಮುಂದುವರೆದು, ವಿಜಯೇಂದ್ರ ಕುಂಕುಮ ಅಳಿಸಿಕೊಂಡ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಅವರಿಗೆ ಯಾವುದೇ ನೈತಿಕತೆಯಿಲ್ಲ. ಕುಂಕುಮವನ್ನು ಯಾವಾಗ ಬೇಕಾದರೂ ಹಚ್ಚುತ್ತಾರೆ, ಯಾವಾಗ ಬೇಕಾದರೂ ತೆಗೆಯುತ್ತಾರೆ. ಕೆಜೆಪಿಯಲ್ಲಿದ್ದಾಗ ಇವರೆ ಅಲ್ಲವೇ ಟಿಪ್ಪು ಜಯಂತಿ ದಿನದಂದು, ಟಿಪ್ಪು ಟೋಪಿ ಹಾಕಿಕೊಂಡು ಹೋಗಿದ್ದವರು ಎಂದು ಆಕ್ರೋಶ ಹೊರ ಹಾಕಿದರು.
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್ಸಿಆರ್ಬಿ)…
ಭಾರತದ ಶಿಕ್ಷಣ ನೀತಿ ಮಕ್ಕಳ ಆರೋಗ್ಯದ ಕುರಿತು ಸ್ಪಷ್ಟ ಮಾರ್ಗಸೂಚಿ ನೀಡಿದ್ದರೂ, ಬಹುತೇಕ ಶಾಲೆಗಳು ಇದನ್ನು ಪಾಲಿಸುತ್ತಿಲ್ಲ ಎಂಬುದು ವಿಷಾದಕರ…
ಕೇಂದ್ರ ಸರ್ಕಾರದಲ್ಲಿ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾಗಿರುವ ಶಿವರಾಜ್ ಸಿಂಗ್ ಚೌಹಾಣ್ ಅವರು ಡಿಸೆಂಬರ್ ೧೬ರಂದು…
ಪರಿಸರಕ್ಕೆ ಪೂರಕವಾದ ವಸ್ತುಗಳನ್ನು ನೀಡಲು ಸಲಹೆ; ಸ್ಮರಣಿಕೆ, ಟ್ರೋಫಿ ಬದಲು ಸಸಿ, ಪುಸ್ತಕ ವಿತರಿಸಲು ಸುತ್ತೋಲೆ ಮೈಸೂರು: ರಾಜ್ಯ ಸರ್ಕಾರ…
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…