ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಏಕವಚನಲ್ಲೇ ಛಾಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ನಾನು ಈ ಕ್ಷೇತ್ರದಲ್ಲಿ ಗೆದ್ದ ಬಳಿಕ ಅವರಪ್ಪ ಬಂದು ನನ್ನನ್ನು ಬಿಜೆಪಿ ಕರೆದುಕೊಂಡು ಹೋಗುತ್ತಾನೆ. ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ್ದರು, ಅವರ ಕೈಕಾಲನ್ನೇ ಕಟ್ಟಿ ಪಕ್ಷಕ್ಕೆ ಮತ್ತೆ ಆಹ್ವಾನಿಸಿರುವಾಗ ಮೂಲ ಬಿಜೆಪಿಯವನಾದ ನನ್ನನ್ನು ಕರೆಯುದಿಲ್ಲವೇ. ಬಿಜೆಪಿಯನ್ನು ಕಟ್ಟಿದವನು ನಾನು, ನಾನು ಬಿಜೆಪಿಯಲ್ಲಿಯೇ ಇದ್ದವನು, ಯಡಿಯೂರಪ್ಪ ಕೆಜೆಪಿ ಕಟ್ಟಿ ನಂತರ ಪಕ್ಷಕ್ಕೆ ವಾಪಾಸಾಗಿದ್ದಾನೆ ಎಂದು ಕಿಡಿಕಾರಿದರು.
ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುವ ಮೂಲಕ ರಾಜ್ಯ ಬಿಜೆಪಿಯನ್ನು ಅಪ್ಪ-ಮಕ್ಕಳಿಂದ ಮಕ್ತ ಮಾಡುತ್ತೇನೆ. ರಾಘವೇಂದ್ರ ಸೋಲುವ ಮೂಲಕ ಆತನ ಕಥೆ ಮುಗಿದಂತೆಯೇ, ಚುನಾವಣೆ ಬಳಿಕ ಬಿ.ವೈ ವಿಜೈಯೇಂದ್ರ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾನೆ ಎಂದು ಏಕವಚನದಲ್ಲಿಯೇ ಈಶ್ವರಪ್ಪ ಮಾತನಾಡಿದರು.
ಮುಂದುವರೆದು, ವಿಜಯೇಂದ್ರ ಕುಂಕುಮ ಅಳಿಸಿಕೊಂಡ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಅವರಿಗೆ ಯಾವುದೇ ನೈತಿಕತೆಯಿಲ್ಲ. ಕುಂಕುಮವನ್ನು ಯಾವಾಗ ಬೇಕಾದರೂ ಹಚ್ಚುತ್ತಾರೆ, ಯಾವಾಗ ಬೇಕಾದರೂ ತೆಗೆಯುತ್ತಾರೆ. ಕೆಜೆಪಿಯಲ್ಲಿದ್ದಾಗ ಇವರೆ ಅಲ್ಲವೇ ಟಿಪ್ಪು ಜಯಂತಿ ದಿನದಂದು, ಟಿಪ್ಪು ಟೋಪಿ ಹಾಕಿಕೊಂಡು ಹೋಗಿದ್ದವರು ಎಂದು ಆಕ್ರೋಶ ಹೊರ ಹಾಕಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…