ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಏಕವಚನಲ್ಲೇ ಛಾಡಿಸಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ನಾನು ಈ ಕ್ಷೇತ್ರದಲ್ಲಿ ಗೆದ್ದ ಬಳಿಕ ಅವರಪ್ಪ ಬಂದು ನನ್ನನ್ನು ಬಿಜೆಪಿ ಕರೆದುಕೊಂಡು ಹೋಗುತ್ತಾನೆ. ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ್ದರು, ಅವರ ಕೈಕಾಲನ್ನೇ ಕಟ್ಟಿ ಪಕ್ಷಕ್ಕೆ ಮತ್ತೆ ಆಹ್ವಾನಿಸಿರುವಾಗ ಮೂಲ ಬಿಜೆಪಿಯವನಾದ ನನ್ನನ್ನು ಕರೆಯುದಿಲ್ಲವೇ. ಬಿಜೆಪಿಯನ್ನು ಕಟ್ಟಿದವನು ನಾನು, ನಾನು ಬಿಜೆಪಿಯಲ್ಲಿಯೇ ಇದ್ದವನು, ಯಡಿಯೂರಪ್ಪ ಕೆಜೆಪಿ ಕಟ್ಟಿ ನಂತರ ಪಕ್ಷಕ್ಕೆ ವಾಪಾಸಾಗಿದ್ದಾನೆ ಎಂದು ಕಿಡಿಕಾರಿದರು.
ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುವ ಮೂಲಕ ರಾಜ್ಯ ಬಿಜೆಪಿಯನ್ನು ಅಪ್ಪ-ಮಕ್ಕಳಿಂದ ಮಕ್ತ ಮಾಡುತ್ತೇನೆ. ರಾಘವೇಂದ್ರ ಸೋಲುವ ಮೂಲಕ ಆತನ ಕಥೆ ಮುಗಿದಂತೆಯೇ, ಚುನಾವಣೆ ಬಳಿಕ ಬಿ.ವೈ ವಿಜೈಯೇಂದ್ರ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲಿದ್ದಾನೆ ಎಂದು ಏಕವಚನದಲ್ಲಿಯೇ ಈಶ್ವರಪ್ಪ ಮಾತನಾಡಿದರು.
ಮುಂದುವರೆದು, ವಿಜಯೇಂದ್ರ ಕುಂಕುಮ ಅಳಿಸಿಕೊಂಡ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿರುವ ಅವರಿಗೆ ಯಾವುದೇ ನೈತಿಕತೆಯಿಲ್ಲ. ಕುಂಕುಮವನ್ನು ಯಾವಾಗ ಬೇಕಾದರೂ ಹಚ್ಚುತ್ತಾರೆ, ಯಾವಾಗ ಬೇಕಾದರೂ ತೆಗೆಯುತ್ತಾರೆ. ಕೆಜೆಪಿಯಲ್ಲಿದ್ದಾಗ ಇವರೆ ಅಲ್ಲವೇ ಟಿಪ್ಪು ಜಯಂತಿ ದಿನದಂದು, ಟಿಪ್ಪು ಟೋಪಿ ಹಾಕಿಕೊಂಡು ಹೋಗಿದ್ದವರು ಎಂದು ಆಕ್ರೋಶ ಹೊರ ಹಾಕಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…