ರಾಜ್ಯ

ಬಜೆಟ್ ಘೋಷಣೆ ಕಡತದಲ್ಲೇ ಉಳಿಯಬಾರದು ; ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಐಎಎಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ನಡೆದ 2026-27ನೇ ಸಾಲಿನ ಬಜೆಟ್ ಅನುಷ್ಠಾನ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘ನಾನು ದಾಖಲೆಯ 17ನೇ ಬಜೆಟ್ ಮಂಡಿಸಿದ್ದೇನೆ. ಆದರೆ ಕಡತದಲ್ಲಿ ಮಲಗಿದ ಬಜೆಟ್‌ನಿಂದ ಜನರಿಗೆ ಪ್ರಯೋಜನವಿಲ್ಲ. ನಿಗದಿತ ಕಾಲಮಿತಿಯಲ್ಲಿ ಕಾಮಗಾರಿ ಶುರುವಾಗಿ, ಮುಗಿಯಬೇಕು’ ಎಂದು ತಾಕೀತು ಮಾಡಿದರು.

‘ನೆಪ ಹೇಳಿದರೆ ಸಹಿಸಲ್ಲ’
ಇಲಾಖೆವಾರು ಪ್ರಗತಿ ಪರಿಶೀಲಿಸಿದ ಸಿಎಂ, ಕೆಲವು ಇಲಾಖೆಗಳಲ್ಲಿ ಟೆಂಡರ್ ಪ್ರಕ್ರಿಯೆ, ಭೂಸ್ವಾಧೀನ ನೆಪ ಹೇಳಿ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ‘ಅನುದಾನ ಬಿಡುಗಡೆಯಾಗಿದೆ, ಆಡಳಿತಾತ್ಮಕ ಅನುಮೋದನೆ ಕೊಟ್ಟಿದ್ದೇವೆ. ಇನ್ನೂ ನೆಪ ಹೇಳಿದರೆ ಶಿಸ್ತುಕ್ರಮ ಖಚಿತ’ ಎಂದು ಎಚ್ಚರಿಸಿದರು.

‘ಗ್ಯಾರಂಟಿ ಜೊತೆಗೆ ಅಭಿವೃದ್ಧಿ’
‘ನಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದೇವೆ. ಅದರ ಜೊತೆಗೆ ಶಿಕ್ಷಣ, ಆರೋಗ್ಯ, ಗ್ರಾಮೀಣ ಅಭಿವೃದ್ಧಿ, ನಗರ ಮೂಲಸೌಕರ್ಯಕ್ಕೆ ದಾಖಲೆ ಅನುದಾನ ನೀಡಿದ್ದೇವೆ. ರಾಜಸ್ವ ಕೊರತೆ 22,957 ಕೋಟಿ ರೂ. ಇದ್ದರೂ, ರಾಜಸ್ವ ಸಂಗ್ರಹದಲ್ಲಿ ಶೇ.8.1ರಷ್ಟು ಪ್ರಗತಿ ಸಾಧಿಸಿದ್ದೇವೆ’ ಎಂದು ಸಿದ್ದರಾಮಯ್ಯ ಅಂಕಿ-ಅಂಶ ನೀಡಿದರು.

11 ‘ಜಿ’ ಮಾದರಿಯ ಮೇಲೆ ಒತ್ತು
ಬಜೆಟ್‌ನಲ್ಲಿ ಘೋಷಿಸಿದ ಗ್ಯಾರಂಟಿ ಆರ್ಥಿಕತೆ, ಗುಡ್ ಪಬ್ಲಿಕ್ ಎಜುಕೇಶನ್, ಗುಡ್ ಹೆಲ್ತ್, ಗ್ರಾಸ್‌ರೂಟ್ಸ್ ಆರ್ಥಿಕತೆ, ಗುಡ್ ಗವರ್ನೆನ್ಸ್, ಗಿಗ್ ಆರ್ಥಿಕತೆ, ಜಿಯೋಗ್ರಾಫಿಕಲ್ ಸಮಾನತೆ, ಗ್ಲೋಬಲ್ ಟ್ರೇಡ್, ಗ್ಲೋಬಲ್ ಪ್ರೋಟೀನ್, ಗ್ರೀನ್ ಆರ್ಥಿಕತೆ, ಗ್ರೋಯಿಂಗ್ ಅರ್ಬನ್ ಆರ್ಥಿಕತೆ – ಈ 11 ‘ಜಿ’ ಮಾದರಿಗಳ ಅನುಷ್ಠಾನಕ್ಕೆ ತಿಂಗಳಿಗೊಮ್ಮೆ ಪ್ರಗತಿ ವರದಿ ಸಲ್ಲಿಸುವಂತೆ ಕಾರ್ಯದರ್ಶಿಗಳಿಗೆ ಸೂಚಿಸಿದರು.

‘ಈ ಬಾರಿ 1.32 ಲಕ್ಷ ಕೋಟಿ ರೂ. ಸಾಲ ಮಾಡಿದ್ದೇವೆ. ರಾಜಸ್ವ ಕೊರತೆ ಜಿಎಸ್‌ಡಿಪಿಯ ಶೇ.2.95ರಷ್ಟಿದೆ. ಸಾಲ ಮಾಡಿಯಾದರೂ ಜನರಿಗೆ ಮೂಲಸೌಕರ್ಯ ಕೊಡಬೇಕು. ಆದರೆ ಆ ಹಣ ಸೋರಿಕೆಯಾಗಬಾರದು, ಕಾಮಗಾರಿ ಗುಣಮಟ್ಟದಲ್ಲಿ ರಾಜಿಯಾಗಬಾರದು’ ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯ ಕಾರ್ಯದರ್ಶಿ, ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳು ಹಾಜರಿದ್ದರು. ‘ಮುಂದಿನ 15 ದಿನದಲ್ಲಿ ಎಲ್ಲ ಇಲಾಖೆಗಳು ಅನುಷ್ಠಾನ ವೇಳಾಪಟ್ಟಿ ನೀಡಬೇಕು. ಪ್ರತಿ 3 ತಿಂಗಳಿಗೊಮ್ಮೆ ನಾನೇ ಖುದ್ದು ಪರಿಶೀಲನೆ ನಡೆಸುತ್ತೇನೆ’ ಎಂದು ಸಿಎಂ ಖಡಕ್ ಸಂದೇಶ ರವಾನಿಸಿದರು.

ಆಂದೋಲನ ಡೆಸ್ಕ್

Recent Posts

ನಾಲ್ವರು ಯೋಧರು ಹುತಾತ್ಮ ; ನಕ್ಸಲರಿಟ್ಟಿದ್ದ ನೆಲಬಾಂಬ್ ನಿಷ್ಕ್ರಿಯಗೊಳಿಸುವಾಗ ದುರ್ಘಟನೆ

ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…

6 mins ago

ಮಂಡ್ಯ | ನೀರಿನ ಕೊಳದಲ್ಲಿ ಗೃಹಿಣಿಯ ಶವ ಪತ್ತೆ ; ಕೊಲೆ ಶಂಕೆ

ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…

11 mins ago

ಮಂಡ್ಯ ನಗರದಲ್ಲಿ ಮರಗಳ ಸಮೀಕ್ಷೆಗೆ ಅರಣ್ಯ ಸಚಿವರ ಆದೇಶ

ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…

15 mins ago

ಟೆಂಪೋ-ಬೈಕ್‌ ಡಿಕ್ಕಿ : ಬೈಕ್‌ ಸವಾರ ಸಾವು ; ಓರ್ವ ಗಂಭೀರ

ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…

2 hours ago

NEET UG Exam | ನಾಳೆ ನೀಟ್ ಪರೀಕ್ಷೆ ; ʼಜೀರೋ ಲೀಕ್‌ʼ ಪಾಲಿಸಿ ಜಾರಿ

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…

3 hours ago

ಅಜ್ಜೀಪುರ ಸಫಾರಿ ಕೇಂದ್ರದಲ್ಲಿ ಬಿಳಿ ಬಣ್ಣದ ಜಿಂಕೆ ದರ್ಶನ

ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…

3 hours ago