ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬುಧವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೆ ಬಜೆಟ್ ದಿನಾಂಕ ತಿಳಿಸಲಾಗುವುದು, ಎಲ್ಲಾ ಪೂರ್ವ ಸಿದ್ಧತೆಗಳು ನಡೆಯುತ್ತಿವೆ ಎಂದರು.
ಸ್ವಂತ ಖರ್ಚಿನಲ್ಲಿ ಶಾಸಕರ ವಿದೇಶ ಪ್ರವಾಸ
ಶಾಸಕರು ವಿದೇಶ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಎಂ ಎಲ್ ಎ ಗಳು ಮತ್ತು ಎಂಎಲ್ ಸಿ ಗಳು ತಮ್ಮ ಸ್ವಂತ ಖರ್ಚಿನಲ್ಲಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದರು.
ವರಿಷ್ಠರ ತೀರ್ಮಾನದಂತೆ ನಡೆಯುತ್ತೇವೆ
ಪತ್ರಕರ್ತರು ನಾಯಕತ್ವ ಬದಲಾವಣೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಪತ್ರಕರ್ತರು ಪದೇ ಪದೇ ಒಂದೇ ವಿಷಯವನ್ನು ಕೇಳಬಾರದು. ನಾಯಕತ್ವ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸಿದರೆ ಅದರಂತೆ ನಾನು ಮತ್ತು ಉಪಮುಖ್ಯಮಂತ್ರಿಗಳಿಬ್ಬರೂ ನಡೆದುಕೊಳ್ಳುತ್ತೇವೆ ಎಂದರು.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…