ದಾವಣಗೆರೆ: ವಿಧಾನಸಭೆಯ ಬಜೆಟ್ ಅಧಿವೇಶ ಮಾರ್ಚ್.3ರಿಂದ 21ರವರೆಗೆ ಎರಡು ಹಂತದಲ್ಲಿ ನಡೆಯಲಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಜಂಟಿ ಸದನ ಉದ್ದೇಶಿಸಿ ಅಧಿವೇಶನದ ಮೊದಲ ದಿನ ಮಾತನಾಡಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಾಹಿತಿ ನೀಡಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲೆ ಚರ್ಚಿಸಲು ಮೂರು ದಿನಗಳ ಕಾಲಾವಕಾಶವಿದೆ. ಮಾರ್ಚ್.7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದು, ಅಧಿವೇಶನದ ರೂಪುರೇಷೆ ಸಿದ್ಧವಾಗುತ್ತಿದೆ ಎಂದು ತಿಳಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ಸಂಬಂಧಿಸಿದ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ. ಪ್ರಕರಣವು ವಿಧಾನಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರ ವ್ಯಾಪ್ತಿಗೆ ಬರುತ್ತದೆ ಎಂದರು.
ಇನ್ನು ಮೈಸೂರಿನ ಉದಯಗಿರಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು ಕ್ರಮ ಕೈಗೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವದಂತಿ ಹರಡುವ ಕೆಲಸವನ್ನು ಯಾರೊಬ್ಬರೂ ಮಾಡಬಾರದು ಎಂದು ಹೇಳಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…