ರಾಜ್ಯ

ಕೋಟೆ ಕಟ್ಕೊಂಡು ಡ್ರಾಮ ಮಾಡ್ತಾವ್ರೆ : ಜನಾರ್ಧನ ರೆಡ್ಡಿ ಬಗ್ಗೆ ಡಿಕೆಶಿ ರೋಷಾಗ್ನಿ

ಬೆಂಗಳೂರು : ಬಳ್ಳಾರಿ ಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಶಾಸಕ ನ.ರಾ.ಭರತ್ ರೆಡ್ಡಿ ಪರವಾಗಿ ನಿಲ್ಲಲಿದೆ. ಚುನಾವಣೆಗಳ ಸೋಲಿನಿಂದ ಹತಾಶೆಗೊಂಡಿರುವ ಶಾಸಕ ಜನಾರ್ದನ ರೆಡ್ಡಿ ಮತ್ತೆ ರಿಪಬ್ಲಿಕ್ ಬಳ್ಳಾರಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸೋಲಿನ ಬಳಿಕ ಜನಾರ್ದನ ರೆಡ್ಡಿ ಮತ್ತು ಶ್ರಿ?ರಾಮುಲು ಒಬ್ಬರನ್ನೊಬ್ಬರು ತಬ್ಬಿಕೊಂಡು ಓಡಾಡುತ್ತಿದ್ದಾರೆ. ಅದು ಅವರ ಇಷ್ಟ ನಮಗೇನು ತೊಂದರೆ ಇಲ್ಲ. ಆದರೆ ಬಳ್ಳಾರಿಯನ್ನು ಮತ್ತೆ ರಿಪಬ್ಲಿಕ್ ಮಾಡಲು ನಾವು ಅವಕಾಶ ನೀಡುವುದಿಲ್ಲ. ನಮ ಶಾಸಕರು ಹಾಗೂ ಕಾರ್ಯಕರ್ತರನ್ನು ನಿಯಂತ್ರಣದಲ್ಲಿ ಇಡಲು ಮುಖ್ಯಮಂತ್ರಿಯವರು ಈಗಾಗಲೇ ಎಲ್ಲಾ ಸೂಚನೆಗಳನ್ನು ನೀಡಿದ್ದಾರೆ ಎಂದರು.

ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ಇಲ್ಲದೆ ಇರುವಾಗ ಯಾವ ಗಲಾಟೆಗಳು ಇರಲಿಲ್ಲ. ಒಂದು ಎಫ್‍ಐಆರ್ ಕೂಡ ದಾಖಲಾಗಿರಲಿಲ್ಲ. ಅವರು ಬಳ್ಳಾರಿಗೆ ಬಂದ ಮೇಲೆ ಪರಿಸ್ಥಿತಿ ಹದಗೆಡುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷ ಶಾಸಕ ಭರತ್ ರೆಡ್ಡಿ ಅವರ ಜೊತೆಯಾಗಿದೆ. ಶಾಂತಿ ಪಾಲನೆಗಾಗಿ ಅವರು ಸ್ಥಳಕ್ಕೆ ಹೋಗಿದ್ದರು. ಗುಂಡು ಹಾರಿಸಿದ್ದು ಯಾರು ಎಂದು ತನಿಖೆಯಿಂದ ತಿಳಿದು ಬರಲಿದೆ ಎಂದರು.

ಖಾಸಗಿ ವ್ಯಕ್ತಿಗಳ ಬಂದೂಕುಗಳಿಗೆ ಕಡಿವಾಣ
ಖಾಸಗಿ ವ್ಯಕ್ತಿಗಳ ಬಂದೂಕುಗಳನ್ನು ಜಪ್ತಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಖಾಸಗಿ ವ್ಯಕ್ತಿಗಳ ಭದ್ರತೆಗೆ ಬಂದೂಕು ಒದಗಿಸುವ ಬಗ್ಗೆ ಕಠಿಣ ನಿಯಮಗಳನ್ನು ರೂಪಿಸಲಾಗುವುದು. ಖಾಸಗಿ ಬಂದೂಕಿನಿಂದ ಗುಂಡು ಸಿಡಿದು ಜೀವ ಹಾನಿಯಾಗಿರುವ ಪ್ರಕರಣದಲ್ಲಿ ಇದು ಎರಡನೇ ದುರ್ಘಟನೆ. ಮುಂದಿನ ದಿನಗಳಲ್ಲಿ ಖಾಸಗಿ ವ್ಯಕ್ತಿಗಳ ಬಂದೂಕುಗಳ ದುರುಪಯೋಗಕ್ಕೆ ಕಡಿವಾಣ ಹಾಕಲಾಗುವುದು ಎಂದು ಹೇಳಿದರು.

ಎಸ್‌ಪಿ ಯಾವ ಶೈಲಿಯಲ್ಲಿ ಉತ್ತರ ನೀಡಿದ್ದಾರೆ ಗೊತ್ತಿದೆ
ಗಲಾಟೆಯಾದಾಗ ಸ್ಥಳದಲ್ಲಿ ಶಾಸಕ ಭರತ್ ರೆಡ್ಡಿ ಇರಲಿಲ್ಲ. ಮನೆ ಮುಂದೆ ಪೊಸ್ಟರ್ ಹಾಕಬಾರದು ಎಂದು ಗಲಾಟೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಕಾನೂನು ತನ್ನದೇ ಆದ ಕ್ರಮಗಳ ಕೈಗೊಳ್ಳುತ್ತದೆ. ಗಲಾಟೆಯಾದ ತಕ್ಷಣ ನಾನೇ ಖುದ್ದಾಗಿ ನನ್ನ ಫೋನ್ ಮೂಲಕ ಅಲ್ಲಿನ ಎಸ್ಪಿ ಅವರಿಗೆ ಮಾತನಾಡಿದ್ದೇನೆ. ಆತ ಯಾವ ಶೈಲಿಯಲ್ಲಿ ಉತ್ತರ ನೀಡಿದ್ದಾನೆ ಎಂದು ಗೊತ್ತಿದೆ. ಆ ಸಂದರ್ಭದಲ್ಲಿ ಶ್ರೀರಾಮುಲು ಕೂಡ ನನಗೆ ಕರೆ ಮಾಡಿದ್ದರು. ಪಕ್ಷ ಯಾವುದೇ ಇದ್ದರೂ ಕಾನೂನು ವ್ಯವಸ್ಥೆ ಮುಖ್ಯ ಎಂದು ತಕ್ಷಣವೇ ಪೊಲೀಸರಿಗೆ ಕರೆ ಮಾಡಿದ್ದೆ. ನಮ ಪಕ್ಷದ ಶಾಸಕ ಭರತ್ ರೆಡ್ಡಿಗೂ ಕೂಡ ಮಾತನಾಡಿದ್ದಾಗಿ ಹೇಳಿದರು.

ಆತ ಡ್ರಾಮಾ ಮಾಸ್ಟರ್
ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್, ಸಿನಿಮಾ ನಿರ್ಮಾಪಕ. ನೂರು ಜನ ಭದ್ರತಾ ಸಿಬ್ಬಂದಿಗಳನ್ನು ಇಟ್ಟುಕೊಂಡು, ಕೋಟೆ ಕಟ್ಟಿಕೊಂಡಿರುವ ಅವರನ್ನು ಕೊಲ್ಲಲು ಯಾರು ಹೋಗುತ್ತಾರೆ. ಕುಟುಂಬದವರ ವಿಧಾನಸಭೆ ಸೋಲನ್ನು ಆರಗಿಸಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿ ಭರತರೆಡ್ಡಿ ವಿರುದ್ಧ ಕೊಲೆ ಯತ್ನದ ಆರೋಪ ಮಾಡುತ್ತಿದ್ದಾರೆ. ಕೊಲೆಗಳ ಇತಿಹಾಸ ಯಾರಿಗಿದೆ ಎಂದು ಜನ ಅರ್ಥಮಾಡಿಕೊಳ್ಳುತ್ತಾರೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…

9 mins ago

ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲಂಗಾಣ ಡಿಸಿಎಂ: ಮಗನ ಮದುವೆಗೆ ಆಹ್ವಾನ

ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…

20 mins ago

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ: 15 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…

37 mins ago

ಹೊಸ ಶಾಸಕರನ್ನು ಮಂತ್ರಿ ಮಾಡಿದ್ರೆ ತಪ್ಪೇನು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

55 mins ago

ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ವಿಚಾರ: ಸಚಿವ ಪರಮೇಶ್ವರ್‌ ರಿಯಾಕ್ಷನ್‌

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್‌ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…

1 hour ago

ಮಹದೇಶ್ವರ ಬೆಟ್ಟದಲ್ಲಿ ಶೀಘ್ರದಲ್ಲಿ ಕಾಮಗಾರಿ ಪೂರ್ಣ: ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ: ಸಚಿವ ಕೆ ವೆಂಕಟೇಶ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ…

2 hours ago