ರಾಜ್ಯ

ಕೋಟೆ ಕಟ್ಕೊಂಡು ಡ್ರಾಮ ಮಾಡ್ತಾವ್ರೆ : ಜನಾರ್ಧನ ರೆಡ್ಡಿ ಬಗ್ಗೆ ಡಿಕೆಶಿ ರೋಷಾಗ್ನಿ

ಬೆಂಗಳೂರು : ಬಳ್ಳಾರಿ ಘಟನೆಯಲ್ಲಿ ಕಾಂಗ್ರೆಸ್ ಪಕ್ಷ ಶಾಸಕ ನ.ರಾ.ಭರತ್ ರೆಡ್ಡಿ ಪರವಾಗಿ ನಿಲ್ಲಲಿದೆ. ಚುನಾವಣೆಗಳ ಸೋಲಿನಿಂದ ಹತಾಶೆಗೊಂಡಿರುವ ಶಾಸಕ ಜನಾರ್ದನ ರೆಡ್ಡಿ ಮತ್ತೆ ರಿಪಬ್ಲಿಕ್ ಬಳ್ಳಾರಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸೋಲಿನ ಬಳಿಕ ಜನಾರ್ದನ ರೆಡ್ಡಿ ಮತ್ತು ಶ್ರಿ?ರಾಮುಲು ಒಬ್ಬರನ್ನೊಬ್ಬರು ತಬ್ಬಿಕೊಂಡು ಓಡಾಡುತ್ತಿದ್ದಾರೆ. ಅದು ಅವರ ಇಷ್ಟ ನಮಗೇನು ತೊಂದರೆ ಇಲ್ಲ. ಆದರೆ ಬಳ್ಳಾರಿಯನ್ನು ಮತ್ತೆ ರಿಪಬ್ಲಿಕ್ ಮಾಡಲು ನಾವು ಅವಕಾಶ ನೀಡುವುದಿಲ್ಲ. ನಮ ಶಾಸಕರು ಹಾಗೂ ಕಾರ್ಯಕರ್ತರನ್ನು ನಿಯಂತ್ರಣದಲ್ಲಿ ಇಡಲು ಮುಖ್ಯಮಂತ್ರಿಯವರು ಈಗಾಗಲೇ ಎಲ್ಲಾ ಸೂಚನೆಗಳನ್ನು ನೀಡಿದ್ದಾರೆ ಎಂದರು.

ಜನಾರ್ದನ ರೆಡ್ಡಿ ಬಳ್ಳಾರಿಯಲ್ಲಿ ಇಲ್ಲದೆ ಇರುವಾಗ ಯಾವ ಗಲಾಟೆಗಳು ಇರಲಿಲ್ಲ. ಒಂದು ಎಫ್‍ಐಆರ್ ಕೂಡ ದಾಖಲಾಗಿರಲಿಲ್ಲ. ಅವರು ಬಳ್ಳಾರಿಗೆ ಬಂದ ಮೇಲೆ ಪರಿಸ್ಥಿತಿ ಹದಗೆಡುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷ ಶಾಸಕ ಭರತ್ ರೆಡ್ಡಿ ಅವರ ಜೊತೆಯಾಗಿದೆ. ಶಾಂತಿ ಪಾಲನೆಗಾಗಿ ಅವರು ಸ್ಥಳಕ್ಕೆ ಹೋಗಿದ್ದರು. ಗುಂಡು ಹಾರಿಸಿದ್ದು ಯಾರು ಎಂದು ತನಿಖೆಯಿಂದ ತಿಳಿದು ಬರಲಿದೆ ಎಂದರು.

ಖಾಸಗಿ ವ್ಯಕ್ತಿಗಳ ಬಂದೂಕುಗಳಿಗೆ ಕಡಿವಾಣ
ಖಾಸಗಿ ವ್ಯಕ್ತಿಗಳ ಬಂದೂಕುಗಳನ್ನು ಜಪ್ತಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಖಾಸಗಿ ವ್ಯಕ್ತಿಗಳ ಭದ್ರತೆಗೆ ಬಂದೂಕು ಒದಗಿಸುವ ಬಗ್ಗೆ ಕಠಿಣ ನಿಯಮಗಳನ್ನು ರೂಪಿಸಲಾಗುವುದು. ಖಾಸಗಿ ಬಂದೂಕಿನಿಂದ ಗುಂಡು ಸಿಡಿದು ಜೀವ ಹಾನಿಯಾಗಿರುವ ಪ್ರಕರಣದಲ್ಲಿ ಇದು ಎರಡನೇ ದುರ್ಘಟನೆ. ಮುಂದಿನ ದಿನಗಳಲ್ಲಿ ಖಾಸಗಿ ವ್ಯಕ್ತಿಗಳ ಬಂದೂಕುಗಳ ದುರುಪಯೋಗಕ್ಕೆ ಕಡಿವಾಣ ಹಾಕಲಾಗುವುದು ಎಂದು ಹೇಳಿದರು.

ಎಸ್‌ಪಿ ಯಾವ ಶೈಲಿಯಲ್ಲಿ ಉತ್ತರ ನೀಡಿದ್ದಾರೆ ಗೊತ್ತಿದೆ
ಗಲಾಟೆಯಾದಾಗ ಸ್ಥಳದಲ್ಲಿ ಶಾಸಕ ಭರತ್ ರೆಡ್ಡಿ ಇರಲಿಲ್ಲ. ಮನೆ ಮುಂದೆ ಪೊಸ್ಟರ್ ಹಾಕಬಾರದು ಎಂದು ಗಲಾಟೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಅವರು, ಕಾನೂನು ತನ್ನದೇ ಆದ ಕ್ರಮಗಳ ಕೈಗೊಳ್ಳುತ್ತದೆ. ಗಲಾಟೆಯಾದ ತಕ್ಷಣ ನಾನೇ ಖುದ್ದಾಗಿ ನನ್ನ ಫೋನ್ ಮೂಲಕ ಅಲ್ಲಿನ ಎಸ್ಪಿ ಅವರಿಗೆ ಮಾತನಾಡಿದ್ದೇನೆ. ಆತ ಯಾವ ಶೈಲಿಯಲ್ಲಿ ಉತ್ತರ ನೀಡಿದ್ದಾನೆ ಎಂದು ಗೊತ್ತಿದೆ. ಆ ಸಂದರ್ಭದಲ್ಲಿ ಶ್ರೀರಾಮುಲು ಕೂಡ ನನಗೆ ಕರೆ ಮಾಡಿದ್ದರು. ಪಕ್ಷ ಯಾವುದೇ ಇದ್ದರೂ ಕಾನೂನು ವ್ಯವಸ್ಥೆ ಮುಖ್ಯ ಎಂದು ತಕ್ಷಣವೇ ಪೊಲೀಸರಿಗೆ ಕರೆ ಮಾಡಿದ್ದೆ. ನಮ ಪಕ್ಷದ ಶಾಸಕ ಭರತ್ ರೆಡ್ಡಿಗೂ ಕೂಡ ಮಾತನಾಡಿದ್ದಾಗಿ ಹೇಳಿದರು.

ಆತ ಡ್ರಾಮಾ ಮಾಸ್ಟರ್
ಜನಾರ್ದನ ರೆಡ್ಡಿ ಡ್ರಾಮಾ ಮಾಸ್ಟರ್, ಸಿನಿಮಾ ನಿರ್ಮಾಪಕ. ನೂರು ಜನ ಭದ್ರತಾ ಸಿಬ್ಬಂದಿಗಳನ್ನು ಇಟ್ಟುಕೊಂಡು, ಕೋಟೆ ಕಟ್ಟಿಕೊಂಡಿರುವ ಅವರನ್ನು ಕೊಲ್ಲಲು ಯಾರು ಹೋಗುತ್ತಾರೆ. ಕುಟುಂಬದವರ ವಿಧಾನಸಭೆ ಸೋಲನ್ನು ಆರಗಿಸಿಕೊಳ್ಳಲಾಗುತ್ತಿಲ್ಲ. ಅದಕ್ಕಾಗಿ ಭರತರೆಡ್ಡಿ ವಿರುದ್ಧ ಕೊಲೆ ಯತ್ನದ ಆರೋಪ ಮಾಡುತ್ತಿದ್ದಾರೆ. ಕೊಲೆಗಳ ಇತಿಹಾಸ ಯಾರಿಗಿದೆ ಎಂದು ಜನ ಅರ್ಥಮಾಡಿಕೊಳ್ಳುತ್ತಾರೆ ಎಂದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

6 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

6 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

8 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

8 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

8 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

16 hours ago