ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕದ ಐವರಿಗೆ ಸಚಿವ ಸ್ಥಾನ ಸಿಕ್ಕಿದೆ. ಅದರಲ್ಲಿ ಮೂವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಸಿಕ್ಕರೆ, ಇನ್ನುಳಿದ ಇಬ್ಬರಿಗೆ ರಾಜ್ಯ ಖಾತೆ ಸಿಕ್ಕಿದೆ.
ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲ ಸೀತಾರಾಮನ್, ಹೆಚ್ ಡಿ ಕುಮಾರಸ್ವಾಮಿ ಹಾಗೂ ಪ್ರಹ್ಲದ್ ಜೋಶಿ ಅವರಿಗೆ ಕ್ಯಾಬಿನೆಟ್ ಖಾತೆ ಸಿಕ್ಕರೆ ವಿ.ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಖಾತೆ ಸಿಕ್ಕಿದೆ.
ಮಂಡ್ಯ ಸಂಸದ ಎಚ್.ಡಿ ಕುಮಾರಸ್ವಾಮಿ ಅವರಿಗೆ ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ, ಧಾರವಾಡ ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಶಿ ಅವರಿಗೆ ಆಹಾರ ಮತ್ತು ಗ್ರಾಹಕ ವ್ಯವಹಾರ, ನವೀಕರಿಸಬಹುದಾದ ಇಂಧನ ಖಾತೆ ಹಾಗೂ ನಿರ್ಮಲ ಸೀತಾರಾಮನ್ ಅವರಿಗೆ ಹಣಕಾಸು ಇಲಾಖೆ ಖಾತೆ ನೀಡಲಾಗಿದೆ.
ಬೆಂಗಳೂರು ಉತ್ತರ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಣ್ಣ, ಸೂಕ್ಷ್ಮ ಹಾಗೂ ಮಧ್ಯಮ ಕೈಗಾರಿಕೆ, ಕಾರ್ಮಿಕ ರಾಜ್ಯ ಖಾತೆ ಹಾಗೂ ತುಮಕೂರು ಸಂಸದ ವಿ.ಸೋಮಣ್ಣಗೆ ಜಲ ಶಕ್ತಿ ಹಾಗೂ ರೈಲ್ವೇ ರಾಜ್ಯ ಖಾತೆ ನೀಡಲಾಗಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…