ರಾಜ್ಯ

ಬೆಂಗಳೂರು ನಾಗರಿಕರಿಗೆ ಆಸ್ತಿ ತೆರಿಗೆ, ಕಸದ ಸೆಸ್‌ ಹೊರೆ: ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ನೀರು, ಹಾಲು, ಮೆಟ್ರೋ ದರ ಹೆಚ್ಚಳವಲ್ಲದೆ ಆಸ್ತಿ ತೆರಿಗೆ, ಕಸದ ಸೆಸ್‌‍ ಹೊರೆಯನ್ನು ಬೆಂಗಳೂರಿನ ನಾಗರಿಕರಿಗೆ ಹೊರಿಸಿರುವ ರಾಜ್ಯ ಸರ್ಕಾರ ಯಾವ ಮೂಲ ಸೌಕರ್ಯಗಳನ್ನು ಕಲ್ಪಿಸಿದೆ? ಎಂದು ಜೆಡಿಎಸ್‌‍ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರಶ್ನಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ರಸ್ತೆಗುಂಡಿಗಳು ಅಪಘಾತಕ್ಕೆ ಕಾರಣವಾಗುತ್ತಿವೆ. ಪ್ರತಿ ವಾರ್ಡ್‌ನಲ್ಲೂ ಘನತ್ಯಾಜ್ಯ ಸಮರ್ಪಕವಾಗಿ ವಿಲೇವಾರಿಯಾಗದೆ ಗಬ್ಬು ನಾರುತ್ತಿವೆ. ರಾಜ್ಯಕ್ಕೆ ಶೇ.30ರಷ್ಟು ತೆರಿಗೆಯನ್ನು ಬೆಂಗಳೂರು ನಾಗರಿಕರು ನೀಡುತ್ತಿದ್ದಾರೆ. ಆದರೂ ಅಗತ್ಯ ಮೂಲ ಸೌಕರ್ಯ ಏಕೆ ಕಲ್ಪಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.

ಹೊರ ವರ್ತುಲ ರಸ್ತೆಯ ಬ್ಲಾಕ್‌ಬಗ್‌ ಕಂಪನಿ ಸಿಇಒ ಅವರು ಮೂಲ ಸೌಕರ್ಯಗಳ ಬಗ್ಗೆ ಎಕ್ಸ್‌ನಲ್ಲಿ ಪ್ರಸ್ತಾಪಿಸಿದ್ದಾರೆ. ಮೂಲ ಸೌಕರ್ಯವಿಲ್ಲದ್ದರಿಂದ ರಾಜ್ಯದಿಂದ ಹೊರಹೋಗುವ ಮಾತನ್ನಾಡಿದ್ದಾರೆ. ಆದರೆ ಬೆಂಗಳೂರು ಉಸ್ತುವಾರಿ ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಮೂಲ ಸೌಕರ್ಯ ಒದಗಿಸಲು ಯಾವ ಕ್ರಮ ಕೈಗೊಂಡಿದ್ದಾರೆ ಎಂದು ಆಗ್ರಹಿಸಿದರು.

ಬಂಡವಾಳ ಹೂಡಿಕೆಗೆ ಸರ್ಕಾರ ಯಾವ ಮೂಲ ಸೌಲಭ್ಯ ಕಲ್ಪಿಸಿದೆ. ನವೆಂಬರ್‌ ವೇಳೆಗೆ ಗುಂಡಿ ಮುಚ್ಚುವ ಗಡುವು ನೀಡಿ 1100 ಕೋಟಿ ರೂ. ಒದಗಿಸುವುದಾಗಿ ಹೇಳಿದ್ದಾರೆ. ಮೂಲ ಸೌಕರ್ಯವಿಲ್ಲದೆ ಉದ್ಯಮಗಳು ನೆರೆಹೊರೆಯ ರಾಜ್ಯಗಳಿಗೆ ಹೋದರೆ ತೆರಿಗೆ ನಷ್ಟ ಉಂಟಾಗಲಿದೆ. ಜಿಬಿಎ ವ್ಯಾಪ್ತಿಯಲ್ಲಿ ವಾರ್ಷಿಕ 850 ಕೋಟಿ ರೂ. ತೆರಿಗೆ ಪಾವತಿಯಾಗುತ್ತಿದೆ. ಇರುವ ಕಂಪನಿಗಳನ್ನು ಉಳಿಸಿಕೊಂಡು ಹೊಸ ಕಂಪನಿಗಳನ್ನು ಬೆಂಗಳೂರಿಗೆ ಕರೆತರುವ ಪ್ರಯತ್ನವಾಗುತ್ತಿಲ್ಲ ಎಂದು ಆಕ್ಷೇಪಿಸಿದರು.
ಮುಂದಿನ ಎರಡು ತಿಂಗಳಲ್ಲಿ ಬೆಂಗಳೂರಿನ ಸಮಸ್ಯೆಗಳು ಪರಿಹಾರವಾಗುತ್ತವೆಯೇ? ಕೃತಕ ಬುದ್ಧಿಮತ್ತೆ ಯುಗದಲ್ಲಿ ಇದ್ದರೂ ಮೂಲಸೌಕರ್ಯ ಏಕೆ ಕಲ್ಪಿಸಲಾಗುತ್ತಿಲ್ಲ ಎಂಬುದನ್ನು ಸರ್ಕಾರ ಉತ್ತರಿಸಬೇಕು. ಉದ್ಯಮಿಗಳು ಸಾರ್ವಜನಿಕರಿಗಾಗುವ ತೊಂದರೆಗಳ ಬಗ್ಗೆ ದನಿಯೆತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

59 mins ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

1 hour ago

ಮೈಸೂರಿನ ಕುವೆಂಪು ಮನೆ ಇನ್ಮುಂದೆ ಸ್ಮಾರಕ : ಸರ್ಕಾರದ ಘೋಷಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…

2 hours ago

ಬೆಳೆ ವಿಮೆ ಪರಿಹಾರ ಸುಧಾರಣೆ : ಅದೇ ಹಂಗಾಮಿನಲ್ಲೇ ವಿತರಣೆಗೆ ಕ್ರಮ ; ಸಚಿವ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ…

3 hours ago

ವಾಜಮಂಗಲ ಬಳಿ ಘರ್ಜಿಸಿದ ಜೆಸಿಬಿ : ಅನಧಿಕೃತ ಕಟ್ಟಡ ನೆಲಸಮ ಮಾಡಿದ ಎಂಡಿಎ

ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…

4 hours ago

ಮುಡಾ ಪ್ರಕರಣದಲ್ಲಿ ಸಿಎಂʼಗೆ ಬಿಗ್‌ ರಿಲೀಫ್‌ : ಬಿ ರಿಪೋರ್ಟ್‌ ಎತ್ತಿ ಹಿಡಿದ ಕೋರ್ಟ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…

4 hours ago