ರಾಜ್ಯ

ಬೆಂಗಳೂರು ನಾಗರಿಕರಿಗೆ ಆಸ್ತಿ ತೆರಿಗೆ, ಕಸದ ಸೆಸ್‌ ಹೊರೆ: ನಿಖಿಲ್‌ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ನೀರು, ಹಾಲು, ಮೆಟ್ರೋ ದರ ಹೆಚ್ಚಳವಲ್ಲದೆ ಆಸ್ತಿ ತೆರಿಗೆ, ಕಸದ ಸೆಸ್‌‍ ಹೊರೆಯನ್ನು ಬೆಂಗಳೂರಿನ ನಾಗರಿಕರಿಗೆ ಹೊರಿಸಿರುವ ರಾಜ್ಯ ಸರ್ಕಾರ ಯಾವ ಮೂಲ ಸೌಕರ್ಯಗಳನ್ನು ಕಲ್ಪಿಸಿದೆ? ಎಂದು ಜೆಡಿಎಸ್‌‍ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಪ್ರಶ್ನಿಸಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ರಸ್ತೆಗುಂಡಿಗಳು ಅಪಘಾತಕ್ಕೆ ಕಾರಣವಾಗುತ್ತಿವೆ. ಪ್ರತಿ ವಾರ್ಡ್‌ನಲ್ಲೂ ಘನತ್ಯಾಜ್ಯ ಸಮರ್ಪಕವಾಗಿ ವಿಲೇವಾರಿಯಾಗದೆ ಗಬ್ಬು ನಾರುತ್ತಿವೆ. ರಾಜ್ಯಕ್ಕೆ ಶೇ.30ರಷ್ಟು ತೆರಿಗೆಯನ್ನು ಬೆಂಗಳೂರು ನಾಗರಿಕರು ನೀಡುತ್ತಿದ್ದಾರೆ. ಆದರೂ ಅಗತ್ಯ ಮೂಲ ಸೌಕರ್ಯ ಏಕೆ ಕಲ್ಪಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.

ಹೊರ ವರ್ತುಲ ರಸ್ತೆಯ ಬ್ಲಾಕ್‌ಬಗ್‌ ಕಂಪನಿ ಸಿಇಒ ಅವರು ಮೂಲ ಸೌಕರ್ಯಗಳ ಬಗ್ಗೆ ಎಕ್ಸ್‌ನಲ್ಲಿ ಪ್ರಸ್ತಾಪಿಸಿದ್ದಾರೆ. ಮೂಲ ಸೌಕರ್ಯವಿಲ್ಲದ್ದರಿಂದ ರಾಜ್ಯದಿಂದ ಹೊರಹೋಗುವ ಮಾತನ್ನಾಡಿದ್ದಾರೆ. ಆದರೆ ಬೆಂಗಳೂರು ಉಸ್ತುವಾರಿ ಹೊತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಮೂಲ ಸೌಕರ್ಯ ಒದಗಿಸಲು ಯಾವ ಕ್ರಮ ಕೈಗೊಂಡಿದ್ದಾರೆ ಎಂದು ಆಗ್ರಹಿಸಿದರು.

ಬಂಡವಾಳ ಹೂಡಿಕೆಗೆ ಸರ್ಕಾರ ಯಾವ ಮೂಲ ಸೌಲಭ್ಯ ಕಲ್ಪಿಸಿದೆ. ನವೆಂಬರ್‌ ವೇಳೆಗೆ ಗುಂಡಿ ಮುಚ್ಚುವ ಗಡುವು ನೀಡಿ 1100 ಕೋಟಿ ರೂ. ಒದಗಿಸುವುದಾಗಿ ಹೇಳಿದ್ದಾರೆ. ಮೂಲ ಸೌಕರ್ಯವಿಲ್ಲದೆ ಉದ್ಯಮಗಳು ನೆರೆಹೊರೆಯ ರಾಜ್ಯಗಳಿಗೆ ಹೋದರೆ ತೆರಿಗೆ ನಷ್ಟ ಉಂಟಾಗಲಿದೆ. ಜಿಬಿಎ ವ್ಯಾಪ್ತಿಯಲ್ಲಿ ವಾರ್ಷಿಕ 850 ಕೋಟಿ ರೂ. ತೆರಿಗೆ ಪಾವತಿಯಾಗುತ್ತಿದೆ. ಇರುವ ಕಂಪನಿಗಳನ್ನು ಉಳಿಸಿಕೊಂಡು ಹೊಸ ಕಂಪನಿಗಳನ್ನು ಬೆಂಗಳೂರಿಗೆ ಕರೆತರುವ ಪ್ರಯತ್ನವಾಗುತ್ತಿಲ್ಲ ಎಂದು ಆಕ್ಷೇಪಿಸಿದರು.
ಮುಂದಿನ ಎರಡು ತಿಂಗಳಲ್ಲಿ ಬೆಂಗಳೂರಿನ ಸಮಸ್ಯೆಗಳು ಪರಿಹಾರವಾಗುತ್ತವೆಯೇ? ಕೃತಕ ಬುದ್ಧಿಮತ್ತೆ ಯುಗದಲ್ಲಿ ಇದ್ದರೂ ಮೂಲಸೌಕರ್ಯ ಏಕೆ ಕಲ್ಪಿಸಲಾಗುತ್ತಿಲ್ಲ ಎಂಬುದನ್ನು ಸರ್ಕಾರ ಉತ್ತರಿಸಬೇಕು. ಉದ್ಯಮಿಗಳು ಸಾರ್ವಜನಿಕರಿಗಾಗುವ ತೊಂದರೆಗಳ ಬಗ್ಗೆ ದನಿಯೆತ್ತಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

5 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

5 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

5 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

5 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

5 hours ago