dharmasthala
ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್ನಲ್ಲಿ ಮೂಳೆಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಇದೀಗ ಆರನೇ ಪಾಯಿಂಟ್ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರ ಪತ್ತೆಯಾಗಿದೆ.
ಆದರೆ ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ. ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ಅಗೆದು ಹುಡುಕಾಟ ನಡೆಸಲಾಗುತ್ತಿದೆ.
ಇನ್ನು ಉತ್ಖನನ ನಡೆಸುವ ಸ್ಥಳದಲ್ಲಿ ನೇತ್ರಾವತಿ ನದಿ ನೀರಿನ ಹರಿವು ಇದ್ದ ಕಾರಣ ಗುಂಡಿಯಲ್ಲಿ ನೀರು ತುಂಬಿದೆ. ನೀರನ್ನು ಹೊರ ತೆಗೆದು ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನು ಸಂಪೂರ್ಣವಾಗಿ ಅಗೆದ ಬಳಿಕ 7 ಹಾಗೂ 8ನೇ ಪಾಯಿಂಟ್ನಲ್ಲಿ ಉತ್ಖನನ ಕಾರ್ಯ ನಡೆಯುವ ಸಾಧ್ಯತೆಯಿದೆ.
ಇನ್ನು ಮಾಹಿತಿಯ ಪ್ರಕಾರ ಆರನೇ ಪಾಯಿಂಟ್ನಲ್ಲಿ ಸಿಕ್ಕಿರುವ ಮೂಳೆಗಳು ಪುರುಷನ ಎಲುಬುಗಳಾಗಿದ್ದು, ತಲೆ ಬುರುಡೆ ಸಹ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…