dharmasthala
ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್ನಲ್ಲಿ ಮೂಳೆಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಇದೀಗ ಆರನೇ ಪಾಯಿಂಟ್ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರ ಪತ್ತೆಯಾಗಿದೆ.
ಆದರೆ ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ. ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಇನ್ನೂ ಆಳಕ್ಕೆ ಅಗೆದು ಹುಡುಕಾಟ ನಡೆಸಲಾಗುತ್ತಿದೆ.
ಇನ್ನು ಉತ್ಖನನ ನಡೆಸುವ ಸ್ಥಳದಲ್ಲಿ ನೇತ್ರಾವತಿ ನದಿ ನೀರಿನ ಹರಿವು ಇದ್ದ ಕಾರಣ ಗುಂಡಿಯಲ್ಲಿ ನೀರು ತುಂಬಿದೆ. ನೀರನ್ನು ಹೊರ ತೆಗೆದು ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ. ಇದನ್ನು ಸಂಪೂರ್ಣವಾಗಿ ಅಗೆದ ಬಳಿಕ 7 ಹಾಗೂ 8ನೇ ಪಾಯಿಂಟ್ನಲ್ಲಿ ಉತ್ಖನನ ಕಾರ್ಯ ನಡೆಯುವ ಸಾಧ್ಯತೆಯಿದೆ.
ಇನ್ನು ಮಾಹಿತಿಯ ಪ್ರಕಾರ ಆರನೇ ಪಾಯಿಂಟ್ನಲ್ಲಿ ಸಿಕ್ಕಿರುವ ಮೂಳೆಗಳು ಪುರುಷನ ಎಲುಬುಗಳಾಗಿದ್ದು, ತಲೆ ಬುರುಡೆ ಸಹ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…