ರಾಜ್ಯ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲ

ಬೆಂಗಳೂರು: ಧರ್ಮಸ್ಥಳದಲ್ಲಿನ ಸಮಾಧಿಗಳ ಉತ್ಖನನ ಪ್ರಕರಣ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿ ಕೋಲಾಹಲದ ವಾತಾವರಣ ನಿರ್ಮಾಣವಾಯಿತು.

ಪ್ರಶ್ನೋತ್ತರದ ಬಳಿಕ ಬಿಜೆಪಿಯ ಕಾರ್ಕಳದ ಶಾಸಕ ವಿ.ಸುನೀಲ್‌ಕುಮಾರ್‌ ಅವರು ಮಾತನಾಡಿ, ಎಸ್‌‍ಐಟಿ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ, ಆದರೆ ತನಿಖೆಯ ಹೆಸರಿನಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಅವಹೇಳನ ನಡೆಯುತ್ತಿದೆ.

ಧರ್ಮಸ್ಥಳವನ್ನು ಗುರಿಯಾಗಿಸಿಕೊಳ್ಳಲಾಗಿದೆ, ನಮ ನಂಬಿಕೆ ಶ್ರದ್ದೆಗಳ ಮೇಲೆ ದಾಳಿಯಾಗುತ್ತಿದೆ. ಈವರೆಗೂ 16 ಗುಂಡಿಗಳನ್ನು ಅಗೆಯಲಾಗಿದೆ. ಅಲ್ಲಿ ಏನು ಸಿಕ್ಕಿದೆ ಎಂಬುದು ಗೊತ್ತಾಗಿಲ್ಲ, ಸಚಿವರು ಉತ್ತರ ನೀಡಿ ಊಹಾಪೋಹಗಳಿಗೆ ತೆರೆ ಎಳೆಯಬೇಕು. ಇನ್ನು ಎಷ್ಟು ಗುಂಡಿಗಳನ್ನು ಅಗೆಯುತ್ತಿರಾ? ಎಲ್ಲಿಯವರೆಗೂ ತನಿಖೆ ನಡೆಯುತ್ತದೆ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಉತ್ತರ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸರ್ಕಾರ ತನಗೆ ಬಂದ ದೂರುಗಳು ಹಾಗೂ ಧರ್ಮಸ್ಥಳ ಭಾಗದ ಜನಸಮಾ ಸಮುದಾಯದ ಒತ್ತಾಯದ ಮೇರೆಗೆ ಜು.19 ರಂದು ಎಸ್‌‍ಐಟಿ ತನಿಖೆಗೆ ಆದೇಶ ನೀಡಿದೆ. ತನಿಖೆ ಪ್ರಗತಿಯಲ್ಲಿದ್ದು ಪೂರ್ಣಗೊಂಡ ಬಳಿಕ ವರದಿ ನೀಡಲಾಗುವುದು ತನಿಖೆಗೆ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ನೂರಾರು ಗುಂಡಿಗಳನ್ನು ಅಗೆಯಲು ಸಾಧ್ಯವಿಲ್ಲ ಎಂದು ವರದಿ ಸಲ್ಲಿಕೆಯಾದ ಬಳಿಕ ಉತ್ತರ ನೀಡಲಾಗುವುದು ಎಂದರು.

ಈ ಹಂತದಲ್ಲಿ ಬಿಜೆಪಿಯ ಸದಸ್ಯರು ಆ ಅನಾಮಿಕ ಯಾರು ಆತ ತಲೆ ಬುರುಡೆಯನ್ನು ಎಲ್ಲಿಂದ ತಂದಿದ್ದ ಎಂದು ಪ್ರಶ್ನಿಸಿ ಗದ್ದಲ ಎಬ್ಬಿಸಿದರು. ಸಭಾಧ್ಯಕ್ಷ ಯು.ಟಿ.ಖಾದರ್‌ ಇಷ್ಟು ದಿನ ಈ ಬಗ್ಗೆ ಸುಮ್ಮನಿದ್ದು ಅಧಿವೇಶನದಲ್ಲಿ ಶೂನ್ಯ ವೇಳೆಗೆ ಚರ್ಚೆ ಮಾಡುತ್ತಿರುವುದು ಏಕೆ? ನಿಮ್ಮ ಅಭಿಪ್ರಾಯಗಳಿದ್ದರೆ ಲಿಖಿತ ರೂಪದಲ್ಲಿ ನೀಡಿ ಎಂದು ಸೂಚಿಸಿದರು.

ಆ.12ರವರೆಗಿನ ತನಿಖೆಯ ಫಲಿತಾಂಶವೇನು ಎಂದು ಸದನದ ಮುಂದಿಡಿ. ಅಗತ್ಯ ಬಿದ್ದರೆ ಎಸ್‌‍ಐಟಿಯಿಂದ ಮಧ್ಯಂತರ ವರದಿ ಪಡೆದುಕೊಳ್ಳಿ ಎಂದು ಮತ್ತೆ ಶಾಸಕ ಸುನೀಲ್‌ ಕುಮಾರ್‌ ಆಗ್ರಹಿಸಿದರು. ಎಸ್‌‍ಐಟಿ ತನಿಖಾ ವರದಿ ಸಲ್ಲಿಸುವ ಮೊದಲು ಚರ್ಚೆ ನಡೆಸುವುದು ಅನಗತ್ಯ. ನಾನು ಉತ್ತರವನ್ನು ನೀಡುವುದಿಲ್ಲ ಎಂದು ಪರಮೇಶ್ವರ್‌ ಸ್ಪಷ್ಟಪಡಿಸಿದರ. ಅಲ್ಲಿಗೆ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದ ಚರ್ಚೆಗೆ ತೆರೆಬಿದ್ದಿತು.

ಆಂದೋಲನ ಡೆಸ್ಕ್

Recent Posts

ಬೆಳಗಾವಿ ಚಳಿಗಾಲದ ಅಧಿವೇಶನ: ಮೊದಲಿಗೆ ಅಗಲಿದ ಗಣ್ಯರಿಗೆ ಸಂತಾಪ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…

25 mins ago

ಮುಂದುವರಿದ ಇಂಡಿಗೋ ಸಮಸ್ಯೆ: ದೇಶಾದ್ಯಂತ 450ಕ್ಕೂ ಹೆಚ್ಚು ವಿಮಾನಗಳು ರದ್ದು

ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…

34 mins ago

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

1 hour ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

1 hour ago

ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರಿಂದ ಮಹಾಮೇಳಾವ್:‌ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…

1 hour ago

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ…

2 hours ago