ರಾಜ್ಯ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ವಿಧಾನಸಭೆಯಲ್ಲಿ ಗದ್ದಲ-ಕೋಲಾಹಲ

ಬೆಂಗಳೂರು: ಧರ್ಮಸ್ಥಳದಲ್ಲಿನ ಸಮಾಧಿಗಳ ಉತ್ಖನನ ಪ್ರಕರಣ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿ ಕೋಲಾಹಲದ ವಾತಾವರಣ ನಿರ್ಮಾಣವಾಯಿತು.

ಪ್ರಶ್ನೋತ್ತರದ ಬಳಿಕ ಬಿಜೆಪಿಯ ಕಾರ್ಕಳದ ಶಾಸಕ ವಿ.ಸುನೀಲ್‌ಕುಮಾರ್‌ ಅವರು ಮಾತನಾಡಿ, ಎಸ್‌‍ಐಟಿ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ, ಆದರೆ ತನಿಖೆಯ ಹೆಸರಿನಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಅವಹೇಳನ ನಡೆಯುತ್ತಿದೆ.

ಧರ್ಮಸ್ಥಳವನ್ನು ಗುರಿಯಾಗಿಸಿಕೊಳ್ಳಲಾಗಿದೆ, ನಮ ನಂಬಿಕೆ ಶ್ರದ್ದೆಗಳ ಮೇಲೆ ದಾಳಿಯಾಗುತ್ತಿದೆ. ಈವರೆಗೂ 16 ಗುಂಡಿಗಳನ್ನು ಅಗೆಯಲಾಗಿದೆ. ಅಲ್ಲಿ ಏನು ಸಿಕ್ಕಿದೆ ಎಂಬುದು ಗೊತ್ತಾಗಿಲ್ಲ, ಸಚಿವರು ಉತ್ತರ ನೀಡಿ ಊಹಾಪೋಹಗಳಿಗೆ ತೆರೆ ಎಳೆಯಬೇಕು. ಇನ್ನು ಎಷ್ಟು ಗುಂಡಿಗಳನ್ನು ಅಗೆಯುತ್ತಿರಾ? ಎಲ್ಲಿಯವರೆಗೂ ತನಿಖೆ ನಡೆಯುತ್ತದೆ ಎಂದು ಪ್ರಶ್ನಿಸಿದ್ದರು.

ಇದಕ್ಕೆ ಉತ್ತರ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸರ್ಕಾರ ತನಗೆ ಬಂದ ದೂರುಗಳು ಹಾಗೂ ಧರ್ಮಸ್ಥಳ ಭಾಗದ ಜನಸಮಾ ಸಮುದಾಯದ ಒತ್ತಾಯದ ಮೇರೆಗೆ ಜು.19 ರಂದು ಎಸ್‌‍ಐಟಿ ತನಿಖೆಗೆ ಆದೇಶ ನೀಡಿದೆ. ತನಿಖೆ ಪ್ರಗತಿಯಲ್ಲಿದ್ದು ಪೂರ್ಣಗೊಂಡ ಬಳಿಕ ವರದಿ ನೀಡಲಾಗುವುದು ತನಿಖೆಗೆ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ನೂರಾರು ಗುಂಡಿಗಳನ್ನು ಅಗೆಯಲು ಸಾಧ್ಯವಿಲ್ಲ ಎಂದು ವರದಿ ಸಲ್ಲಿಕೆಯಾದ ಬಳಿಕ ಉತ್ತರ ನೀಡಲಾಗುವುದು ಎಂದರು.

ಈ ಹಂತದಲ್ಲಿ ಬಿಜೆಪಿಯ ಸದಸ್ಯರು ಆ ಅನಾಮಿಕ ಯಾರು ಆತ ತಲೆ ಬುರುಡೆಯನ್ನು ಎಲ್ಲಿಂದ ತಂದಿದ್ದ ಎಂದು ಪ್ರಶ್ನಿಸಿ ಗದ್ದಲ ಎಬ್ಬಿಸಿದರು. ಸಭಾಧ್ಯಕ್ಷ ಯು.ಟಿ.ಖಾದರ್‌ ಇಷ್ಟು ದಿನ ಈ ಬಗ್ಗೆ ಸುಮ್ಮನಿದ್ದು ಅಧಿವೇಶನದಲ್ಲಿ ಶೂನ್ಯ ವೇಳೆಗೆ ಚರ್ಚೆ ಮಾಡುತ್ತಿರುವುದು ಏಕೆ? ನಿಮ್ಮ ಅಭಿಪ್ರಾಯಗಳಿದ್ದರೆ ಲಿಖಿತ ರೂಪದಲ್ಲಿ ನೀಡಿ ಎಂದು ಸೂಚಿಸಿದರು.

ಆ.12ರವರೆಗಿನ ತನಿಖೆಯ ಫಲಿತಾಂಶವೇನು ಎಂದು ಸದನದ ಮುಂದಿಡಿ. ಅಗತ್ಯ ಬಿದ್ದರೆ ಎಸ್‌‍ಐಟಿಯಿಂದ ಮಧ್ಯಂತರ ವರದಿ ಪಡೆದುಕೊಳ್ಳಿ ಎಂದು ಮತ್ತೆ ಶಾಸಕ ಸುನೀಲ್‌ ಕುಮಾರ್‌ ಆಗ್ರಹಿಸಿದರು. ಎಸ್‌‍ಐಟಿ ತನಿಖಾ ವರದಿ ಸಲ್ಲಿಸುವ ಮೊದಲು ಚರ್ಚೆ ನಡೆಸುವುದು ಅನಗತ್ಯ. ನಾನು ಉತ್ತರವನ್ನು ನೀಡುವುದಿಲ್ಲ ಎಂದು ಪರಮೇಶ್ವರ್‌ ಸ್ಪಷ್ಟಪಡಿಸಿದರ. ಅಲ್ಲಿಗೆ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದ ಚರ್ಚೆಗೆ ತೆರೆಬಿದ್ದಿತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

5 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

5 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

5 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

5 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

5 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

5 hours ago