Legislative Assembly prLegislative Assembly proceedingsoceedings
ಬೆಂಗಳೂರು: ಧರ್ಮಸ್ಥಳದಲ್ಲಿನ ಸಮಾಧಿಗಳ ಉತ್ಖನನ ಪ್ರಕರಣ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿ ಕೋಲಾಹಲದ ವಾತಾವರಣ ನಿರ್ಮಾಣವಾಯಿತು.
ಪ್ರಶ್ನೋತ್ತರದ ಬಳಿಕ ಬಿಜೆಪಿಯ ಕಾರ್ಕಳದ ಶಾಸಕ ವಿ.ಸುನೀಲ್ಕುಮಾರ್ ಅವರು ಮಾತನಾಡಿ, ಎಸ್ಐಟಿ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ, ಆದರೆ ತನಿಖೆಯ ಹೆಸರಿನಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಅವಹೇಳನ ನಡೆಯುತ್ತಿದೆ.
ಧರ್ಮಸ್ಥಳವನ್ನು ಗುರಿಯಾಗಿಸಿಕೊಳ್ಳಲಾಗಿದೆ, ನಮ ನಂಬಿಕೆ ಶ್ರದ್ದೆಗಳ ಮೇಲೆ ದಾಳಿಯಾಗುತ್ತಿದೆ. ಈವರೆಗೂ 16 ಗುಂಡಿಗಳನ್ನು ಅಗೆಯಲಾಗಿದೆ. ಅಲ್ಲಿ ಏನು ಸಿಕ್ಕಿದೆ ಎಂಬುದು ಗೊತ್ತಾಗಿಲ್ಲ, ಸಚಿವರು ಉತ್ತರ ನೀಡಿ ಊಹಾಪೋಹಗಳಿಗೆ ತೆರೆ ಎಳೆಯಬೇಕು. ಇನ್ನು ಎಷ್ಟು ಗುಂಡಿಗಳನ್ನು ಅಗೆಯುತ್ತಿರಾ? ಎಲ್ಲಿಯವರೆಗೂ ತನಿಖೆ ನಡೆಯುತ್ತದೆ ಎಂದು ಪ್ರಶ್ನಿಸಿದ್ದರು.
ಇದಕ್ಕೆ ಉತ್ತರ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸರ್ಕಾರ ತನಗೆ ಬಂದ ದೂರುಗಳು ಹಾಗೂ ಧರ್ಮಸ್ಥಳ ಭಾಗದ ಜನಸಮಾ ಸಮುದಾಯದ ಒತ್ತಾಯದ ಮೇರೆಗೆ ಜು.19 ರಂದು ಎಸ್ಐಟಿ ತನಿಖೆಗೆ ಆದೇಶ ನೀಡಿದೆ. ತನಿಖೆ ಪ್ರಗತಿಯಲ್ಲಿದ್ದು ಪೂರ್ಣಗೊಂಡ ಬಳಿಕ ವರದಿ ನೀಡಲಾಗುವುದು ತನಿಖೆಗೆ ಕಾಲಮಿತಿಯನ್ನು ನಿಗದಿ ಮಾಡಲಾಗಿದೆ ನೂರಾರು ಗುಂಡಿಗಳನ್ನು ಅಗೆಯಲು ಸಾಧ್ಯವಿಲ್ಲ ಎಂದು ವರದಿ ಸಲ್ಲಿಕೆಯಾದ ಬಳಿಕ ಉತ್ತರ ನೀಡಲಾಗುವುದು ಎಂದರು.
ಈ ಹಂತದಲ್ಲಿ ಬಿಜೆಪಿಯ ಸದಸ್ಯರು ಆ ಅನಾಮಿಕ ಯಾರು ಆತ ತಲೆ ಬುರುಡೆಯನ್ನು ಎಲ್ಲಿಂದ ತಂದಿದ್ದ ಎಂದು ಪ್ರಶ್ನಿಸಿ ಗದ್ದಲ ಎಬ್ಬಿಸಿದರು. ಸಭಾಧ್ಯಕ್ಷ ಯು.ಟಿ.ಖಾದರ್ ಇಷ್ಟು ದಿನ ಈ ಬಗ್ಗೆ ಸುಮ್ಮನಿದ್ದು ಅಧಿವೇಶನದಲ್ಲಿ ಶೂನ್ಯ ವೇಳೆಗೆ ಚರ್ಚೆ ಮಾಡುತ್ತಿರುವುದು ಏಕೆ? ನಿಮ್ಮ ಅಭಿಪ್ರಾಯಗಳಿದ್ದರೆ ಲಿಖಿತ ರೂಪದಲ್ಲಿ ನೀಡಿ ಎಂದು ಸೂಚಿಸಿದರು.
ಆ.12ರವರೆಗಿನ ತನಿಖೆಯ ಫಲಿತಾಂಶವೇನು ಎಂದು ಸದನದ ಮುಂದಿಡಿ. ಅಗತ್ಯ ಬಿದ್ದರೆ ಎಸ್ಐಟಿಯಿಂದ ಮಧ್ಯಂತರ ವರದಿ ಪಡೆದುಕೊಳ್ಳಿ ಎಂದು ಮತ್ತೆ ಶಾಸಕ ಸುನೀಲ್ ಕುಮಾರ್ ಆಗ್ರಹಿಸಿದರು. ಎಸ್ಐಟಿ ತನಿಖಾ ವರದಿ ಸಲ್ಲಿಸುವ ಮೊದಲು ಚರ್ಚೆ ನಡೆಸುವುದು ಅನಗತ್ಯ. ನಾನು ಉತ್ತರವನ್ನು ನೀಡುವುದಿಲ್ಲ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರ. ಅಲ್ಲಿಗೆ ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದ ಚರ್ಚೆಗೆ ತೆರೆಬಿದ್ದಿತು.
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…
ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…
ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…