ಬೆಂಗಳೂರು: ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಲು ಮುಂದಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ಬಸ್ ಪ್ರಯಾಣ ದರ ಅಧಿಕೃತವಾಗಿ ಜಾರಿಯಾಗಲಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಈ ಕುರಿತು ಇಂದು(ಜ.4) ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ, ಎನ್ಡಬ್ಲ್ಯುಕೆಆರ್ಟಿಸಿ ಮತ್ತು ಕೆಕೆಆರ್ಟಿಸಿ ಬಸ್ಗಳ ಟಿಕೆಟ್ ದರವನ್ನು ಶೇಕಡಾ 15 ರಷ್ಟು ಹೆಚ್ಚಳ ಮಾಡಿದೆ. ಈ ಪ್ರಯಾಣ ದರವೂ ಇಂದಿನಿಂದಲೇ ಅಂದರೆ ಜನವರಿ.5ರ ಮಧ್ಯರಾತ್ರಿಯಿಂದಲೇ ಜಾರಿಯಾಗಲಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕೆಲ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿತ್ತು. ಅದರ ಬೆನ್ನಲ್ಲೇ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವೂ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಸರ್ಕಾರ ಆದೇಶಿಸಿದೆ.
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…
ನವದೆಹಲಿ: 2026ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…