ಬೆಳಗಾವಿ: ಭಾಷಾ ವಿಚಾರವಾಗಿ ಕಂಡಕ್ಟರ್ ಮೇಲೆ ಹಲ್ಲೆ ಹಾಗೂ ಗಲಾಟೆಯಿಂದ ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಸ್ಥಗಿತಗೊಂಡಿದ್ದ ಬಸ್ ಸಂಚಾರ ಇಂದಿನಿಂದ ಪುನಾರಂಭಗೊಂಡಿದೆ.
ಭಾಷೆಯ ವಿಚಾರವಾಗಿ ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು ಕರ್ನಾಟಕ ಬಸ್ಗೆ ಮಸಿ ಬಳಿದು ಗೂಂಡಾಗಿರಿ ಪ್ರದರ್ಶಿಸಿ, ಕರ್ನಾಟಕ ಬಸ್ ಚಾಲಕನಿಂದ ಜೈ ಮಹಾರಾಷ್ಟ್ರ ಘೋಷಣೆ ಹಾಕಿಸಿದ್ದರು. ಇದಕ್ಕೆ ಬೆಳಗಾವಿ ಚಲೋ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶಿವಸೇನಾ ಕಾರ್ಯಕರ್ತರಿಗೆ ತಕ್ಕ ಉತ್ತರ ನೀಡಿದ್ದರು.
ಇದರಿಂದ ಎರಡು ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಂಡು, ಎರಡು ರಾಜ್ಯದ ಪ್ರಯಾಣಿಕರು ಪರದಾಟ ನಡೆಸಿದ್ದರು. ಅಲ್ಲದೇ 4 ದಿನಗಳಲ್ಲಿ ಕರ್ನಾಟಕ ಸರ್ಕಾರ ಕೋಟ್ಯಂತರ ರೂಪಾಯಿ ನಷ್ಟ ಅನುಭವಿಸಿದೆ.
ಇದರಿಂದ ಎಚ್ಚೆತ್ತ ಬೆಳಗಾವಿ ಮತ್ತು ಕೊಲ್ಲಾಪುರ ಡಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಸ್ ಆರಂಭಿಸಲು ಮಾತುಕತೆ ನಡೆಸಿ ಬಸ್ ಸಿಬ್ಬಂದಿಗಳ ಹಾಗೂ ಪ್ರಯಾಣಿಕರ ಸುರಕ್ಷತೆಗೆ ಒತ್ತು ಕೊಟ್ಟು ಪರಸ್ಪರ ಒಪ್ಪಂದ ಮಾಡಿಕೊಂಡಿದ್ದಾರೆ.
ಇದೀಗ ಎರಡು ರಾಜ್ಯದ ಮಧ್ಯೆ ಬಸ್ ಸಂಚಾರ ಆರಂಭವಾಗಿದ್ದು, ಬೆಳಗಾವಿಯಿಂದ ಕೊಲ್ಲಾಪುರ, ಪುಣೆ, ಮುಂಬೈ, ಶಿರಡಿ, ನಾಸಿಕ್ಗೆ ಬಸ್ ಸೇವೆ ಆರಂಭವಾಗಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…