ರಾಜ್ಯ

ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವಿನ ಬಸ್‌ ಸಂಚಾರ ಪುನರ್‌ ಆರಂಭ

ಬೆಳಗಾವಿ: ಭಾಷಾ ವಿಚಾರವಾಗಿ ಕಂಡಕ್ಟರ್‌ ಮೇಲೆ ಹಲ್ಲೆ ಹಾಗೂ ಗಲಾಟೆಯಿಂದ ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಸ್ಥಗಿತಗೊಂಡಿದ್ದ ಬಸ್‌ ಸಂಚಾರ ಇಂದಿನಿಂದ ಪುನಾರಂಭಗೊಂಡಿದೆ.

ಭಾಷೆಯ ವಿಚಾರವಾಗಿ ಮಹಾರಾಷ್ಟ್ರದಲ್ಲಿ ಶಿವಸೇನಾ ಕಾರ್ಯಕರ್ತರು ಕರ್ನಾಟಕ ಬಸ್‌ಗೆ ಮಸಿ ಬಳಿದು ಗೂಂಡಾಗಿರಿ ಪ್ರದರ್ಶಿಸಿ, ಕರ್ನಾಟಕ ಬಸ್‌ ಚಾಲಕನಿಂದ ಜೈ ಮಹಾರಾಷ್ಟ್ರ ಘೋಷಣೆ ಹಾಕಿಸಿದ್ದರು. ಇದಕ್ಕೆ ಬೆಳಗಾವಿ ಚಲೋ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶಿವಸೇನಾ ಕಾರ್ಯಕರ್ತರಿಗೆ ತಕ್ಕ ಉತ್ತರ ನೀಡಿದ್ದರು.

ಇದರಿಂದ ಎರಡು ರಾಜ್ಯಗಳ ನಡುವಿನ ಬಸ್‌ ಸಂಚಾರ ಸ್ಥಗಿತಗೊಂಡು, ಎರಡು ರಾಜ್ಯದ ಪ್ರಯಾಣಿಕರು ಪರದಾಟ ನಡೆಸಿದ್ದರು. ಅಲ್ಲದೇ 4 ದಿನಗಳಲ್ಲಿ ಕರ್ನಾಟಕ ಸರ್ಕಾರ ಕೋಟ್ಯಂತರ ರೂಪಾಯಿ ನಷ್ಟ ಅನುಭವಿಸಿದೆ.

ಇದರಿಂದ ಎಚ್ಚೆತ್ತ ಬೆಳಗಾವಿ ಮತ್ತು ಕೊಲ್ಲಾಪುರ ಡಿಸಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಬಸ್‌ ಆರಂಭಿಸಲು ಮಾತುಕತೆ ನಡೆಸಿ ಬಸ್‌ ಸಿಬ್ಬಂದಿಗಳ ಹಾಗೂ ಪ್ರಯಾಣಿಕರ ಸುರಕ್ಷತೆಗೆ ಒತ್ತು ಕೊಟ್ಟು ಪರಸ್ಪರ ಒಪ್ಪಂದ ಮಾಡಿಕೊಂಡಿದ್ದಾರೆ.

ಇದೀಗ ಎರಡು ರಾಜ್ಯದ ಮಧ್ಯೆ ಬಸ್‌ ಸಂಚಾರ ಆರಂಭವಾಗಿದ್ದು, ಬೆಳಗಾವಿಯಿಂದ ಕೊಲ್ಲಾಪುರ, ಪುಣೆ, ಮುಂಬೈ, ಶಿರಡಿ, ನಾಸಿಕ್‌ಗೆ ಬಸ್‌ ಸೇವೆ ಆರಂಭವಾಗಿದೆ.

ಆಂದೋಲನ ಡೆಸ್ಕ್

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

3 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

3 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

4 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

6 hours ago