ಹಾವೇರಿ: ಪಕ್ಕದ ರಾಜ್ಯಗಳಾದ ಆಂಧ್ರ ಪ್ರದೇಶ, ತಮಿಳುನಾಡಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಬಸ್ ಪ್ರಯಾಣ ದರ ತುಂಬಾ ಕಡಿಮೆ ಇದೆ ಎಂದು ಬಸ್ ಟಿಕೆಟ್ ದರ ಏರಿಕೆಯನ್ನು ಸಚಿವ ಶಿವಾನಂದ್ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ.
ಈ ಬಗ್ಗೆ ಹಾವೇರಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಜ್ಯದ ಬಡ ಜನತೆಯ ಬೆಳವಣಿಗೆಯನ್ನು ಸಹಿಸುವುದಿಲ್ಲ. ಅವರಿಗೆ ಹೋರಾಟ ಮಾಡುವುದು ಬಿಟ್ಟರೆ ಅಭಿವೃದ್ದಿಯ ಬಗ್ಗೆ ಚರ್ಚಿಸಿ ಎಂದರೆ ಚರ್ಚೆಗೆ ಬರುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಶಕ್ತಿ ಯೋಜನೆಯಲ್ಲಿ ಹೆಣ್ಣು ಮಕ್ಕಳನ್ನು ಓಡಾಡಿಸುತ್ತಿರುವುದು ಲಾಭ-ನಷ್ಟದ ಉದ್ದೇಶವಲ್ಲ. ಹೆಣ್ಣು ಮಕ್ಕಳಿಗೆ, ಬಡವರಿಗೆ ಏನು ಕೊಡಬೇಕೋ ಅದನ್ನು ಕೊಡುವುದು ನಮ್ಮ ಉದ್ದೇಶ ಎಂದರು.
ದುಡಿಯುವ ಗಂಡು ಮಕ್ಕಳಿಗೆ 15% ಭಾರ ಆಗಬಹುದು. ಆದರೆ ಪ್ರತಿನಿತ್ಯ ಹೆಚ್ಚು ಓಡಾಡುತ್ತಿರುವುದು ಹೆಣ್ಣು ಮಕ್ಕಳು, ಗಂಡು ಮಕ್ಕಳಲ್ಲ ಎಂದರು.
ಇನ್ನು ಅಧಿಕಾರ ಹಂಚಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಿಎಂ, ಡಿಸಿಎಂ ಸೇರಿದಂತೆ ಇನ್ನಿತರ ಸ್ಥಾನಕ್ಕೆ ವರಿಷ್ಠರ ತೀರ್ಮಾನವೇ ಅಂತಿಮವಾಗಲಿದೆ. ಈ ಬಗ್ಗೆ ಸಿಎಲ್ಪಿ ಸಭೆಯಲ್ಲಿ ನಿರ್ಣಯವಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…
ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…