ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ವೈಶಾಕ್ ಬಂಧಿತ ಆರೋಪಿ. ಈತ ಪತ್ರದ ಮೂಲಕ ಅರವಿಂದ್ ರೆಡ್ಡಿ ಅವರನ್ನು ಸ್ಯಾಂಡಲ್ವುಡ್ ನಟಿಯೊಬ್ಬರ ಜೊತೆಗಿನ ವಿವಾದವನ್ನು ಬಗೆಹರಿಸಿಕೊಳ್ಳುವಂತೆಯೂ, ಇಲ್ಲದಿದ್ದರೆ 6 ರಿಂದ 7 ಕೋಟಿ ರೂಪಾಯಿ ಹಣ ನೀಡಬೇಕೆಂದೂ ಆರೋಪಿ ಬೇಡಿಕೆ ಇಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈ ಬೆದರಿಕೆ ಪತ್ರವನ್ನು ಬ್ಲೂ ಡಾರ್ಟ್ ಕೊರಿಯರ್ ಮೂಲಕ ಕಳುಹಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ HAL ಪೊಲೀಸರು ಆರೋಪಿ ವೈಶಾಖ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಸ್ಯಾಂಡಲ್ವುಡ್ ನಟಿ ಕೃಷಿ ತಾಪಂಡಳ ಸ್ನೇಹಿತ ಎಂದು ಹೇಳಲಾಗುತ್ತಿದೆ. ಜನವರಿ ತಿಂಗಳಲ್ಲಿ ಬೆದರಿಕೆ ಪತ್ರ ಬಂದ ಬಳಿಕ ಅರವಿಂದ್ ರೆಡ್ಡಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆಯೇ ಅರವಿಂದ್ ರೆಡ್ಡಿ ಅವರ ಮೇಲೆ ಸ್ಯಾಂಡಲ್ವುಡ್ ನಟಿಯೊಬ್ಬರು ಲೈಂಗಿಕ ಕಿರುಕುಳ, ಹಿಂಬಾಲಿಸುವಿಕೆ ಹಾಗೂ ಬೆದರಿಕೆ ಆರೋಪಗಳನ್ನು ಮಾಡಿದ್ದರು. ಆ ಪ್ರಕರಣದಲ್ಲಿ ಅವರು ಬಂಧನಕ್ಕೊಳಗಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈಗ ಇನ್ನೊಂದು ಬೆದರಿಕೆ ಪ್ರಕರಣದಲ್ಲಿ ಆರೋಪಿ ಬಂಧನವಾಗಿರುವುದು ಗಮನಾರ್ಹವಾಗಿದೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…