ರಾಜ್ಯ

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ವೈಶಾಕ್ ಬಂಧಿತ ಆರೋಪಿ. ಈತ ಪತ್ರದ ಮೂಲಕ ಅರವಿಂದ್ ರೆಡ್ಡಿ ಅವರನ್ನು ಸ್ಯಾಂಡಲ್‌ವುಡ್ ನಟಿಯೊಬ್ಬರ ಜೊತೆಗಿನ ವಿವಾದವನ್ನು ಬಗೆಹರಿಸಿಕೊಳ್ಳುವಂತೆಯೂ, ಇಲ್ಲದಿದ್ದರೆ 6 ರಿಂದ 7 ಕೋಟಿ ರೂಪಾಯಿ ಹಣ ನೀಡಬೇಕೆಂದೂ ಆರೋಪಿ ಬೇಡಿಕೆ ಇಟ್ಟಿದ್ದಾನೆ ಎಂದು ತಿಳಿದುಬಂದಿದೆ. ಈ ಬೆದರಿಕೆ ಪತ್ರವನ್ನು ಬ್ಲೂ ಡಾರ್ಟ್ ಕೊರಿಯರ್ ಮೂಲಕ ಕಳುಹಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ HAL ಪೊಲೀಸರು ಆರೋಪಿ ವೈಶಾಖ್ ಎಂಬಾತನನ್ನು ಬಂಧಿಸಿದ್ದಾರೆ. ಈತ ಸ್ಯಾಂಡಲ್‌ವುಡ್ ನಟಿ ಕೃಷಿ ತಾಪಂಡಳ ಸ್ನೇಹಿತ ಎಂದು ಹೇಳಲಾಗುತ್ತಿದೆ. ಜನವರಿ ತಿಂಗಳಲ್ಲಿ ಬೆದರಿಕೆ ಪತ್ರ ಬಂದ ಬಳಿಕ ಅರವಿಂದ್ ರೆಡ್ಡಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆಯ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿಂದೆಯೇ ಅರವಿಂದ್ ರೆಡ್ಡಿ ಅವರ ಮೇಲೆ ಸ್ಯಾಂಡಲ್‌ವುಡ್ ನಟಿಯೊಬ್ಬರು ಲೈಂಗಿಕ ಕಿರುಕುಳ, ಹಿಂಬಾಲಿಸುವಿಕೆ ಹಾಗೂ ಬೆದರಿಕೆ ಆರೋಪಗಳನ್ನು ಮಾಡಿದ್ದರು. ಆ ಪ್ರಕರಣದಲ್ಲಿ ಅವರು ಬಂಧನಕ್ಕೊಳಗಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈಗ ಇನ್ನೊಂದು ಬೆದರಿಕೆ ಪ್ರಕರಣದಲ್ಲಿ ಆರೋಪಿ ಬಂಧನವಾಗಿರುವುದು ಗಮನಾರ್ಹವಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago