ರಾಜ್ಯ

ಒಂದು ಖರೀದಿಸಿದರೆ ಮತ್ತೊಂದು ಫ್ರೀʼ: ಇದೇ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಎಂದ ವಿಜಯೇಂದ್ರ

ಬೆಂಗಳೂರು: ಬಸ್‌ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ರಾಜ್ಯದ ಜನತೆಗೆ ಆಘಾತ ತಂದಿದ್ದೀರಿ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಸಮಾಜಿಕ ಜಾಲತಾಣ ʼಎಕ್ಸ್‌ʼ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ರಾಜ್ಯದ ಜನತೆಗೆ ಪಂಚಭಾಗ್ಯ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ ಎಂದು ಹೇಳುತ್ತೀರಾ. ಆದರೆ ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು ಸಾರಿಗೆ ಸಂಸ್ಥೆ ನಷ್ಟದ ಹಾದಿ ತುಳಿಯಲು ಕಾರಣರಾಗಿದ್ದೀರಿ ಎಂದು ಆರೋಪಿಸಿದ್ದಾರೆ.

ನಿಮ್ಮ ಈ ಗ್ಯಾರಂಟಿ ಯೋಜನೆಗಳು ವಾಣಿಜ್ಯ ಉತ್ಪನ್ನಗಳ ಮಾರಾಟದ ಮಳಿಗೆಗಳಲ್ಲಿ ಒಂದು ಖರೀದಿಸಿದರೆ ಮತ್ತೊಂದು ಫ್ರೀ ಎನ್ನುವ ಆಗಿದೆ. ಒಂದನ್ನು ಕೊಡುವುದು ಇನ್ನೊಂದರಲ್ಲಿ ಕಿತ್ತುಕೊಳ್ಳುವುದು ಎಂದು ವ್ಯಂಗ್ಯವಾಡಿದ್ದಾರೆ.

ಶೇಕಡಾ.15 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸುವ ಮೂಲಕ ʼಮಹಿಳೆಯರಿಗೆ ಉಚಿತ. ಪುರುಷರಿಗೆ ಅದರ ಹೊರೆ ಖಚಿತʼ ಎನ್ನುವ ಹಾಗೆ ಮಾಡಿದ್ದೀರಾ. ಇದನ್ನು ವಿರೋಧಿಸಿ ಬಿಜೆಪಿ ಜನರ ಪರ ಧ್ವನಿ ಎತ್ತಲಿದೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಸ್‌ ಪ್ರಯಾಣ ದರ ಏರಿಕೆಯ ಪ್ರಸ್ತಾಪವನ್ನು ಇಲ್ಲಿಗೆ ಕೈ ಬಿಡಬೇಕು. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಲಿದೆ. ಯಾವುದೇ ಕಾರಣಕ್ಕೂ ಬಸ್‌ ಪ್ರಯಾಣ ದರ ಏರಿಕೆ ಮಾಡಬಾರದು ಎಂದು ಆಗ್ರಹಿಸಿದರು. ಒಂದು ವೇಳೆ ಪ್ರಯಾಣ ದರ ಏರಿಕೆ ಮಾಡಿದರೆ ಸರ್ಕಾರದ ವಿರುದ್ಧ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

5 mins ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

11 mins ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

19 mins ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

25 mins ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

9 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

12 hours ago