ರಾಜ್ಯ

2028ರ ಹೊತ್ತಿಗೆ ದೇಶ ಹಾಗೂ ರಾಜ್ಯ ಏಡ್ಸ್‌ ಮುಕ್ತವಾಗಲಿ:ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2028ರ ಹೊತ್ತಿಗೆ ಭಾರತದ ದೇಶ, ಕರ್ನಾಟಕ ರಾಜ್ಯ ಏಡ್ಸ್ ಮುಕ್ತವಾಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಇದ್ದ ವಿಶ್ವ ಏಡ್ಸ್ ದಿನ 2023 ಮತ್ತು 25 ನೇ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿಶ್ವ ಏಡ್ಸ್ ದಿನ, ಈ ಸಾಂಕ್ರಾಮಿಕ ರೋಗವನ್ನು ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಹೆಚ್ ಐ ವಿ ಮುಕ್ತ ಸಮಾಜವಾಗಿಸುವುದು ಎಲ್ಲರ ಜವಾಬ್ದಾರಿ ಎಂದರು.

ಇತ್ತಿಚಿನ ದಿನಗಳಲ್ಲಿ ಹೆಚ್ ಐವಿ ಪೀಡಿತರ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ಈ ರೋಗ 1986 ರಲ್ಲಿ ಭಾರತದಲ್ಲಿ ಹಾಗೂ 1987 ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಯಿತು. ನಮ್ಮ ಸಮಾಜವನ್ನು ಹೆಚ್ ಐ ವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು ಎಂದು ತಿಳಿಸಿದರು.

ಭಾರತ ಏಡ್ಸ್ ಪ್ರಕರಣಗಳಲ್ಲಿ ವಿಶ್ವದಲ್ಲಿಯೇ 3 ನೇ ಸ್ಥಾನದಲ್ಲಿದೆ. ನಾವು ಹೆಚ್ಚು ಜಾಗೃತರಾಗುವುದು ಅವಶ್ಯ. ರೋಗಿಗಳೊಂದಿಗೆ ಮಾತನಾಡಿದರೆ ರೋಗ ಬರುತ್ತದೆ ಎಂದು ಕೆಲವರಿಗೆ ತಪ್ಪು ತಿಳುವಳಿಕೆಗಳಿವೆ. ಹೆಚ್ಚಾಗಿ ರಕ್ತದ ಮೂಲಕವಾಗಿ ಹರಡುತ್ತದೆ. ಇದು ಜನರಿಗೆ ಗೊತ್ತಿರಬೇಕು. ಗೊತ್ತಿಲ್ಲದಿದ್ದರೆ ಕಾಯಿಲೆ ತಡೆಗಟ್ಟಲು ಸಾಧ್ಯ. ಏಡ್ಸ್ ರೋಗ ಬಂದರೆ ತಕ್ಷಣ ಏನೂ ಆಗೋಲ್ಲ. ಆದರೆ ಇದು ವಾಸಿಯಾಗದ ರೋಗ. ಇಷ್ಟೆಲ್ಲಾ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್, ರೋಗಕ್ಕೆ ಮಾತ್ರ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆಯವರು ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು ಎಂದರು.

ಸಮಾರಂಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಎಪಿಎಸ್ ಅಧ್ಯಕ್ಷ ಅಭಯ್ ಸಿಂಗ್, ಸಂಜನಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

andolanait

Recent Posts

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

27 mins ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

2 hours ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

2 hours ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

2 hours ago

ನರೇಗಾ ವಿರೋಧಿ ಕೇಂದ್ರ ಸಚಿವರು, ಸಂಸದರು : ಸಚಿವ ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…

3 hours ago

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಗೀಳು : ಡಿಜಿಟಲ್‌ ಲಾಕ್‌ ಪ್ರಯೋಗಕ್ಕೆ ಮುಂದಾದ ಸರ್ಕಾರ

ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…

3 hours ago