ರಾಜ್ಯ

2028ರ ಹೊತ್ತಿಗೆ ದೇಶ ಹಾಗೂ ರಾಜ್ಯ ಏಡ್ಸ್‌ ಮುಕ್ತವಾಗಲಿ:ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2028ರ ಹೊತ್ತಿಗೆ ಭಾರತದ ದೇಶ, ಕರ್ನಾಟಕ ರಾಜ್ಯ ಏಡ್ಸ್ ಮುಕ್ತವಾಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಇದ್ದ ವಿಶ್ವ ಏಡ್ಸ್ ದಿನ 2023 ಮತ್ತು 25 ನೇ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿಶ್ವ ಏಡ್ಸ್ ದಿನ, ಈ ಸಾಂಕ್ರಾಮಿಕ ರೋಗವನ್ನು ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಹೆಚ್ ಐ ವಿ ಮುಕ್ತ ಸಮಾಜವಾಗಿಸುವುದು ಎಲ್ಲರ ಜವಾಬ್ದಾರಿ ಎಂದರು.

ಇತ್ತಿಚಿನ ದಿನಗಳಲ್ಲಿ ಹೆಚ್ ಐವಿ ಪೀಡಿತರ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ಈ ರೋಗ 1986 ರಲ್ಲಿ ಭಾರತದಲ್ಲಿ ಹಾಗೂ 1987 ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಯಿತು. ನಮ್ಮ ಸಮಾಜವನ್ನು ಹೆಚ್ ಐ ವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು ಎಂದು ತಿಳಿಸಿದರು.

ಭಾರತ ಏಡ್ಸ್ ಪ್ರಕರಣಗಳಲ್ಲಿ ವಿಶ್ವದಲ್ಲಿಯೇ 3 ನೇ ಸ್ಥಾನದಲ್ಲಿದೆ. ನಾವು ಹೆಚ್ಚು ಜಾಗೃತರಾಗುವುದು ಅವಶ್ಯ. ರೋಗಿಗಳೊಂದಿಗೆ ಮಾತನಾಡಿದರೆ ರೋಗ ಬರುತ್ತದೆ ಎಂದು ಕೆಲವರಿಗೆ ತಪ್ಪು ತಿಳುವಳಿಕೆಗಳಿವೆ. ಹೆಚ್ಚಾಗಿ ರಕ್ತದ ಮೂಲಕವಾಗಿ ಹರಡುತ್ತದೆ. ಇದು ಜನರಿಗೆ ಗೊತ್ತಿರಬೇಕು. ಗೊತ್ತಿಲ್ಲದಿದ್ದರೆ ಕಾಯಿಲೆ ತಡೆಗಟ್ಟಲು ಸಾಧ್ಯ. ಏಡ್ಸ್ ರೋಗ ಬಂದರೆ ತಕ್ಷಣ ಏನೂ ಆಗೋಲ್ಲ. ಆದರೆ ಇದು ವಾಸಿಯಾಗದ ರೋಗ. ಇಷ್ಟೆಲ್ಲಾ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್, ರೋಗಕ್ಕೆ ಮಾತ್ರ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆಯವರು ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು ಎಂದರು.

ಸಮಾರಂಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಎಪಿಎಸ್ ಅಧ್ಯಕ್ಷ ಅಭಯ್ ಸಿಂಗ್, ಸಂಜನಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

andolanait

Recent Posts

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

31 seconds ago

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

19 mins ago

ನಾಗರಹೊಳೆ | ಅಕ್ರಮ ಉರುಳಿಗೆ ಸಿಲುಕಿ ಹುಲಿ ಬಲಿ

ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…

26 mins ago

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

1 hour ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

1 hour ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

4 hours ago